ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತೆರವಾಗದ ಮೀನುಗಳು:
ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿ ಈಗಾಲೇ ಮೂರು ದಿನಗಳು ಕಳೆದಿವೆ. ದಡಕ್ಕೆ ಬಂದು ಸೇರಿರುವ ರಾಶಿ ರಾಶಿ ಮೀನುಗಳು ಕೊಳೆತು ಗಬ್ಬುನಾರುತ್ತಿವೆ. ನೀರಿನಲ್ಲಿಯೇ ಹಾಗೆ ಬಿಟ್ಟರೆ ನೀರು ಮತ್ತಷ್ಟು ಮಲಿನಗೊಳ್ಳುವ ಆತಂಕ ಎದುರಾಗಿದೆ. ಮೀನುಗಾರಿಕೆ ಇಲಾಖೆ ಅಥವಾ ಸಂಬಂಧಟ್ಟ ಇಲಾಖೆಯವರು ಮೃತ ಮೀನಿಗಳನ್ನು ಕೆರೆಯಿಂದ ತೆಗೆದು ಗುಂಡಿಯಲ್ಲಿ ಹಾಕಿ ವಿಲೇವಾರಿ ಮಾಡಬೇಕಿದೆ.ತಾಲೂಕಿಗೆ ಬಾರದ ಮಾಲಿನ್ಯ ನಿಯಂತ್ರಣ ಮಂಡಳಿ:
ಕೋಟ್...............
ಈ ಭಾಗದ ಕೆರೆಗಳಲ್ಲಿ ಮೀನುಗಳ ಮಾರಣ ಹೋಮ ಇದೇ ಮೊದಲಲ್ಲ. ಕೊನೆಯೂ ಅಲ್ಲ. ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಲೇ ಇದೆ. ಕೈಗಾರಿಕಾ ತ್ಯಾಜ್ಯ ನೀರನ್ನು ರಾತ್ರೋರಾತ್ರಿ ಕಳ್ಳದಾರಿಯಲ್ಲಿ ಕೆರೆಗೆ ಹರಿಸಿರುವುದರಿಂದ ಇಂದು ಮೀನುಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣರಾದವರ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಬೇಕು.-ರಾಜಘಟ್ಟ ರವಿ, ಕನ್ನಡಪರ ಹೋರಾಟಗಾರ
ಕೋಟ್...........ಕೆರೆಯ ನೀರು ಶುದ್ಧವಾಗಿಯೇ ಇತ್ತು. ಕಳೆದ ಮೂರು ದಿನಗಳ ಹಿಂದೆ ಯಾರೂ ಕಾರ್ಖಾನೆಯವರು ರಾಸಾಯನಿಕಯುಕ್ತ ನೀರನ್ನು ಕೆರೆಗೆ ಹರಿಸಿರುವುದರಿಂದ ಅಥವಾ ಬಿಸಿಲು ಹೆಚ್ಚಾಗಿ ಕೆರೆಯಲ್ಲಿ ಆಮ್ಲಜನಕದ ಕೊರತೆಯುಂಟಾಗಿ ಮೀನುಗಳು ಸಾವನ್ನಪ್ಪಿರಬಹುದು. ಕೈಗಾರಿಕೆಯವರ ವಿರುದ್ಧ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಬಿಗಿ ಕ್ರಮ ಜರುಗಿಸಬೇಕು.
-ಲೋಹಿತ್, ವೈ.ಟಿ. ಪರಿಸರಾಸಕ್ತ17ಕೆಡಿಬಿಪಿ2-ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ವ್ಯಾಪ್ತಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ.--17ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸತ್ತು ತೇಲುತ್ತಿರುವ ರಾಶಿ ರಾಶಿ ಮೀನುಗಳು.