- ಬೇಕರಿ ನಡೆಸುತ್ತಿದ್ದ ತಮಿಳುನಾಡಿನ ಮೂವರು ಸೂತ್ರದಾರರು: ಎಸ್ಪಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಎಸ್ಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮೂಲದ ವಿಜಯಕುಮಾರ, ಅಜಯಕುಮಾರ ಹಾಗೂ ನ್ಯಾಮತಿ- ಹೊನ್ನಾಳಿಯವರಾದ ಅಭಿಷೇಕ, ಮಂಜುನಾಥ, ಚಂದ್ರು ಬಂಧಿತರು. ತಮಿಳುನಾಡು ಮೂಲಕ ಮತ್ತೊಬ್ಬ ಆರೋಪಿ ಪರಮಾನಂದನ ಶೋಧಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ನ್ಯಾಮತಿ ಪಟ್ಟಣದಲ್ಲಿ ತಮಿಳುನಾಡು ಮೂಲದ ವಿಜಯಕುಮಾರ, ಅಜಯಕುಮಾರ ಹಾಗೂ ಪರಮಾನಂದ ಅನೇಕ ವರ್ಷಗಳಿಂದ ಬೇಕರಿ ನಡೆಸುತ್ತಿದ್ದರು. ಈ ಮೂವರ ಜೊತೆಗೆ ನ್ಯಾಮತಿ, ಹೊನ್ನಾಳಿಯವರಾದ ಅಭಿಷೇಕ, ಮಂಜುನಾಥ ಹಾಗೂ ಚಂದ್ರು ಸೇರಿಕೊಂಡು ಕಳೆದ ನವೆಂಬರ್ ತಿಂಗಳಲ್ಲಿ ನ್ಯಾಮತಿ ಬ್ಯಾಂಕ್ ದರೋಡೆ ಮಾಡಿದ್ದರು ಎಂದರು.ಎಸ್ಬಿಐ ನ್ಯಾಮತಿ ಶಾಖೆಯಲ್ಲಿ 22 ಕೆ.ಜಿ. ಚಿನ್ನ ಸೇರಿದಂತೆ ಇತರೆ ವಸ್ತು ಕಳುವಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದರೋಡೆಕೋರರ ಪತ್ತೆಗೆ ಇಲಾಖೆ ಅನೇಕ ತಂಡಗಳನ್ನು ರಚಿಸಲಾಗಿತ್ತು. ಬೇರೆ ಬೇರೆ ರಾಜ್ಯಗಳಿಗೂ ತಂಡವು ದರೋಡೆಕೋರರ ಪತ್ತೆಗೆ ತೆರಳಿತ್ತು. ಇದೀಗ ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಲೆಗೆ ಕೆಡವಲಾಗಿದೆ ಎಂದರು.
ನ್ಯಾಮತಿ ಪಟ್ಟಣದ ಎಸ್ಬಿಐ ಬ್ಯಾಂಕ್ ಶಾಖೆ ಹಿಂಭಾಗದ ಕಾಡು ಹಾದಿಯಲ್ಲಿ ಸುಮಾರು 4 ಕಿಮೀ ದೂರದಿಂದ ಆರೂ ಜನ ದರೋಡೆಕೋರರು ನಡೆದುಕೊಂಡೇ ಬಂದಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಕಾರದ ಪುಡಿಯನ್ನು ಹಾಕಿ, ಸಾಕ್ಷ್ಯ ಸಿಗಬಾರದೆಂಬ ಲೆಕ್ಕಾಚಾರವನ್ನು ದರೋಡೆಕೋರರು ಮಾಡಿದ್ದರು ಎಂದು ಎಸ್ಪಿ ಅವರು ತಿಳಿಸಿದರು.
- - - -27ಕೆಡಿವಿಜಿ3.ಜೆಪಿಜಿ: ಉಮಾ ಪ್ರಶಾಂತ, ಜಿಲ್ಲಾ ಎಸ್ಪಿ