ಐದು ಹಸು, ಒಂದು ಕರು, ಕೊಬ್ಬರಿ ಆಕಸ್ಮಿಕ ಬೆಂಕಿಗಾಹುತಿ

KannadaprabhaNewsNetwork |  
Published : Feb 24, 2025, 12:32 AM IST
ಶಾಸಕ ಕೆ,ಎಂ ಶಿವಲಿಂಗೇಗೌಡ ಸಾಂತ್ವನ ಹೇಳಿದರಲ್ಲದೆ ಇದಕ್ಕೆ ತಕ್ಕ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು | Kannada Prabha

ಸಾರಾಂಶ

ಆಕಸ್ಮಿಕ ಬೆಂಕಿ ಅವಘಡದಿಂದ ಐದು ಹಸು ಹಾಗೂ ಒಂದು ಕರು ಹಾಗೂ ₹15,000 ಕೊಬ್ಬರಿ, ₹10,000 ತೆಂಗಿನ ಕಾಯಿ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಹೆಂಜಗೊಂಡನಹಳ್ಳಿ ತೋಟದ ಮನೆಯಲ್ಲಿ ನಡೆದಿದೆ.

ಅರಸೀಕೆರೆ: ಆಕಸ್ಮಿಕ ಬೆಂಕಿ ಅವಘಡದಿಂದ ಐದು ಹಸು ಹಾಗೂ ಒಂದು ಕರು ಹಾಗೂ ₹15,000 ಕೊಬ್ಬರಿ, ₹10,000 ತೆಂಗಿನ ಕಾಯಿ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಹೆಂಜಗೊಂಡನಹಳ್ಳಿ ತೋಟದ ಮನೆಯಲ್ಲಿ ನಡೆದಿದೆ.

ಶಿವಣ್ಣ ಎಂಬುವರು ತೋಟದಲ್ಲಿ ರಾತ್ರಿ 8 ಗಂಟೆಯಲ್ಲಿ ಹಾಲು ಕರೆದು ಬೀಗ ಹಾಕಿಕೊಂಡು ಬಂದ ನಂತರ ಹೋಗಿ ಬೆಳಗ್ಗೆ ಬಂದು ನೋಡಿದಾಗ ಐದು ಹಸುಗಳು ಹಾಗೂ ಒಂದು ಕರು, ಕೊ ಬ್ಬರಿ, ತೆಂಗಿನ ಕಾಯಿ ಸುಟ್ಟು ಕರುಕಲಾಗಿದೆ. ಸ್ಥಳಕ್ಕೆ ಶಾಸಕ ಕೆ,ಎಂ ಶಿವಲಿಂಗೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತನಿಗೆ ಆಗಿರುವ ನಷ್ಟಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಅಗ್ನಿಶಾಮಕದಳ, ಪಶುಸಂಗೋಪನಾ ಇಲಾಖೆ ವೈದ್ಯರು, ಪೋಲೀಸ್ ಇಲಾಖೆ ಕಂದಾಯ ಇಲಾಖೆ ಅಧಿಕಾರಿ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಜ ಕೃಷಿ; ಆನಂದಮಯ ಜೀವನಕ್ಕೆ ದಾರಿ ಕುರಿತು 3 ದಿನಗಳ ತರಬೇತಿ
ಸಿದ್ದರಾಮಯ್ಯ ಪರ, ವಿರುದ್ಧ ಡಿನ್ನರ್ ಮೀಟಿಂಗ್‌ಗೆ ಸೀಮಿತ