ಮೊಬೈಲ್ ಸೆಲ್ಫಿಗೆ ಹೋದ ಐವರು ಕಾವೇರಿಯಲ್ಲಿ ಜಲ ಸಮಾಧಿ

KannadaprabhaNewsNetwork |  
Published : Jun 25, 2026, 01:45 AM ISTUpdated : Jun 25, 2026, 05:22 AM IST
Cauvery

ಸಾರಾಂಶ

ಹಲಗೂರು: ದಡದಲ್ಲಿ ನಿಂತು ಮೊಬೈಲ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾವೇರಿ ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ಸೇರಿ ಕಾರು ಚಾಲಕ ಮೃತಪಟ್ಟಿರುವ ಘೋರ ದುರಂತ ಮುತ್ತತ್ತಿಯಲ್ಲಿ ಬುಧವಾರ ಸಂಜೆ ಜರುಗಿದೆ

ಹಲಗೂರು: ದಡದಲ್ಲಿ ನಿಂತು ಮೊಬೈಲ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾವೇರಿ ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ಸೇರಿ ಕಾರು ಚಾಲಕ ಮೃತಪಟ್ಟಿರುವ ಘೋರ ದುರಂತ ಮುತ್ತತ್ತಿಯಲ್ಲಿ ಬುಧವಾರ ಸಂಜೆ ಜರುಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಪುತ್ರಿಯರಾದ ಪ್ರಿಯಾಂಕ(28), ಶ್ವೇತಾ (38), ಈಕೆ ಪುತ್ರಿ ಚೈತ್ರಾ (20) ಹಾಗೂ ಬೆಂಗಳೂರಿನ ಕಾರಿನ ಚಾಲಕ ಮಹೇಶ್ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೀಗರ ಔತಣಕೂಟ ನಿಮಿತ್ತ ಆಗಮಿಸಿ ಪೂಜೆ

ಸಾತನೂರಿನ ಕಬ್ಬಾಳು ದೇವಿ ದೇವಸ್ಥಾನ ಸಮೀಪ ಬೀಗರ ಔತಣಕೂಟ ನಿಮಿತ್ತ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣಕ್ಕೆ ಭೇಟಿ ನೀಡಿ ಮುತ್ತತ್ತಿರಾಯಸ್ವಾಮಿ ದೇವರ ದರ್ಶನ ಪಡೆಯಲು ಆಗಮಿಸಿದ್ದರು.

ದೇವರ ದರ್ಶನ ಪಡೆದ ನಂತರ ಸಮೀಪದಲ್ಲೇ ಇದ್ದ ಕಾವೇರಿ ನದಿ ದಡದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ವಿಜಯಮ್ಮ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾರೆ. ಇವರನ್ನು ರಕ್ಷಿಸಲು ಒಬ್ಬರಿಗೊಬ್ಬರು ರಕ್ಷಣೆಗೆ ಹೋಗಿ ನಾಲ್ವರು ನದಿಗೆ ಬಿದ್ದಿದ್ದಾರೆ.

ರಕ್ಷಣೆಗೆ ಧಾವಿಸಿಮುಳುಗಿದ ಚಾಲಕ

ನಾಲ್ವರು ಸಹ ಕೊಚ್ಚಿ ಹೋಗುತ್ತಿದ್ದನ್ನು ನೋಡಿದ ಕಾರು ಚಾಲಕ ಮಹೇಶ್ ಕೂಡ ರಕ್ಷಣೆಗೆ ಧಾವಿಸಿ ಅವರು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನೀರಿನಲ್ಲಿ ಮುಳುಗಿದ್ದ ಮೃತದೇಹಗಳನ್ನು ನುರಿತ ಈಜುಗಾರರ ಸಹಾಯದಿಂದ ರಾತ್ರಿ ಸುಮಾರು 7 ಗಂಟೆ ವೇಳೆಗೆ ನದಿಯಿಂದ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪಂಚನಾಮೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ವಿ.ಜೆ.ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದಲ್ಲಿ ಸಿಎಚ್‌ಸಿ ಗೋವರ್ಧನ್, ಮೋಹನ್ ಕುಮಾರ್, ಪ್ರಶಾಂತ್ ಕುಮಾರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಗೀತಾ ಅಂಚಿನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಕ್ಕಳಿಗೆ 3 ತಿಂಗಳಾದರೂ ಸಿಕ್ಕಿಲ್ಲ ಶೂ, ಸಾಕ್ಸ್‌!
ಕಾಖಂಡಕಿ, ಸುತ್ತಮುತ್ತಲಿನ ತಾಣಗಳ ಸಂಶೋಧನೆ ನಡೆಯಲಿ: ಸಚಿವ ಎಂ.ಬಿ. ಪಾಟೀಲ