ಕನ್ನಡಪ್ರಭ ವಾರ್ತೆ ಮಂಗಳೂರು
ಕಾಸರಗೋಡು ಜಿಲ್ಲೆ ಬೀಮನಡಿ ಗ್ರಾಮದ ನೌಫಲ್ (38), ಪೈವಳಿಕೆಯ ಮನ್ಸೂರ್ (36), ಕಾಸರಗೋಡು ಬಂದ್ಯೋಡ್ ನಿವಾಸಿ ಅಬ್ದುಲ್ ಲತೀಫ್ ಅಲಿಯಾಸ್ ತೋಕು ಲತೀಫ್ (29), ಕಡಂಬಾರ್ ಅಂಚೆಯ ಮೊಹಮ್ಮದ್ ಅನ್ಸರ್ (27) ಹಾಗೂ ಮೊಹಮ್ಮದ್ ಸಾಲಿ (31) ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಕರಣ-1:ಮಾ.12ರಂದು ನಾಟೆಕಲ್ ಪರಿಸರದಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ನೌಫಲ್ ಹಾಗೂ ಮನ್ಸೂರ್ ಎಂಬವರನ್ನು ವಶಕ್ಕೆ ಪಡೆದಾಗ 2 ಪಿಸ್ತೂಲ್, 4 ಸಜೀವ ಮದ್ದುಗುಂಡು ಪತ್ತೆಯಾಗಿದೆ. ಅವರಿಂದ 2 ಮೊಬೈಲ್ ಪೋನು, ಸ್ಕಾರ್ಪಿಯೋ ಕಾರು ಸೇರಿದಂತೆ ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 14,60,000 ರು. ಆಗಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ನೌಫಲ್ ವಿರುದ್ಧ ಈ ಹಿಂದೆ ಕೇರಳ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಸಾಗಾಟ/ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಇನ್ನೋರ್ವ ಆರೋಪಿ ಮನ್ಸೂರ್ ವಿರುದ್ಧ ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣ ದಾಖಲಾಗಿವೆ.
ಮಾರ್ಚ್ 12ರಂದು ಕೇರಳದಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಅಬ್ದುಲ್ ಲತೀಫ್ ಅಲಿಯಾಸ್ ತೋಕು ಲತೀಫ್ನನ್ನು ಬಂಧಿಸಲಾಗಿದೆ. ಈತನಿಂದ 12.895 ಕೆಜಿ ಗಾಂಜಾ, ಮೊಬೈಲ್ ಫೋನ್ ಹಾಗೂ ಕಾರು ಸೇರಿದಂತೆ ಒಟ್ಟು 15,70,000 ರು. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ-3:
ಆರೋಪಿಗಳ ಪೈಕಿ ಮೊಹಮ್ಮದ್ ಅಸ್ಲರ್ ವಿರುದ್ಧ ಹಲ್ಲೆ, ದರೋಡೆ, ಕೊಲೆಯತ್ನ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ ಹಾಗೂ ಕರ್ನಾಟಕ ರಾಜ್ಯದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿವೆ. ಇನ್ನೋರ್ವ ಆರೋಪಿ ಮೊಹಮ್ಮದ್ ಸಾಲಿ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ, ಹಲ್ಲೆ, ಕೊಲೆ ಯತ್ನ, ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.
ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ಕೆ. ರವಿಶಂಕರ್ ಇದ್ದರು.