ಕನ್ನಡಪ್ರಭ ವಾರ್ತೆ ವಿಜಯಪುರ
ಜೂನ್ 27ರಿಂದ ಜುಲೈ 11ರವರೆಗೆ ನಡೆಯಲಿರುವ ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥೆ ಹಾಗೂ ಕಲಾ ನಿಕಾಯದ ಡೀನ್ ಪ್ರೊ.ರಾಜು ಬಾಗಲಕೋಟ ಅವರು ನೋಡಲ್ ಅಧಿಕಾರಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿನಿಯರಾದ ಕಲ್ಪನಾ ರಾಠೋಡ, ಅಶ್ವಿನಿ ಕಾಳೇಕರ, ಐಶ್ವರ್ಯ ಪಾಟೀಲ, ಶಾಹೀನ್ ಬಿರಾದಾರ ಹಾಗೂ ಅಕ್ಷತಾ ಕುಲಕರ್ಣಿ ವಿಶ್ವವಿದ್ಯಾಲಯ ಪ್ರತಿನಿಧಿಸಲಿದ್ದಾರೆ.
ಈ ಕಾರ್ಯಕ್ರಮ ಮೂಲಕ ವಿದ್ಯಾರ್ಥಿನಿಯರಿಗೆ ಅಂತಾರಾಷ್ಟ್ರೀಯ ಶೈಕ್ಷಣಿಕ ವಾತಾವರಣ, ನಾಯಕತ್ವ ಕೌಶಲ್ಯ, ಹವಾಮಾನ ಸ್ಥೈರ್ಯ, ನಗರಾಭಿವೃದ್ಧಿ, ಸಮಾನತೆ ಹಾಗೂ ಜಾಗತಿಕ ಸವಾಲುಗಳ ಕುರಿತು ನೇರ ಅನುಭವ ಮತ್ತು ಅರಿವು ಪಡೆಯುವ ಅವಕಾಶ ದೊರೆಯಲಿದೆ. ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಸಂವಾದ, ಅಧ್ಯಯನ ಮತ್ತು ಅನುಭವಗಳ ವಿನಿಮಯದ ಮೂಲಕ ಅವರಲ್ಲಿ ಸಂಶೋಧನಾ ಮನೋಭಾವ, ನವೀನ ಚಿಂತನೆ ಹಾಗೂ ಜಾಗತಿಕ ದೃಷ್ಟಿಕೋನ ವೃದ್ಧಿಯಾಗಲಿದೆ.ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಸಂತಸ ವ್ಯಕ್ತಪಡಿಸಿ, ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಇಂತಹ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಅವಕಾಶವನ್ನು ವಿದ್ಯಾರ್ಥಿನಿಯರು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ಹೊಸ ಸಾಧನೆ ಮಾಡಲಿದ್ದಾರೆ. ಅವರು ಗಳಿಸುವ ಅನುಭವಗಳು ಇತರ ವಿದ್ಯಾರ್ಥಿನಿಯರಿಗೂ ಪ್ರೇರಣೆಯಾಗಲಿವೆ ಎಂದು ತಿಳಿಸಿದ್ದಾರೆ. ಮಹಿಳಾ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಂಶೋಧನೆ ಹಾಗೂ ಅಂತಾರಾಷ್ಟ್ರೀಯ ಶೈಕ್ಷಣಿಕ ಸಹಭಾಗಿತ್ವಗಳಿಗೆ ವಿಶ್ವವಿದ್ಯಾಲಯ ವಿಶೇಷ ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗತಿಕ ಅವಕಾಶಗಳನ್ನು ವಿದ್ಯಾರ್ಥಿನಿಯರಿಗೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಅವರು ತಿಳಿಸಿದರು.