ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪಂಜಿನ ಮೆರವಣಿಗೆ

KannadaprabhaNewsNetwork |  
Published : May 22, 2026, 02:15 AM IST
 ಫೋಟೋ 21KRT1ಕಾರಟಗಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ,ಎನ್ಎಸ್ಯುಐ ದಿಂದ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು. | Kannada Prabha

ಸಾರಾಂಶ

ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿ ಪರೀಕ್ಷೆ ಬರೆಯುವುದರ ಹಿಂದೆ ಮಕ್ಕಳ ಅಪಾರ ಶ್ರಮವಿರುತ್ತದೆ. ಒಂದು ಬಾರಿ ಬರೆಯುವುದೇ ಕಷ್ಟ. ಕೆಲವರು ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಎರಡು ವರ್ಷಗಳಿಂದ ತರಬೇತಿ ಪಡೆದಿರುತ್ತಾರೆ

ಕಾರಟಗಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ತಾಲೂಕು ಘಟಕದಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಪಂಜಿ‌ನ ಮೆರವಣಿಗೆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ಪ್ರತಿಭಟನೆ ನಡೆಯಿತು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿ ಮತ್ತು ಕಾಂಗ್ರೆಸ್ ಮುಖಂಡರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿ ನೀಟ್ ಅಕ್ರಮ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿ ಪರೀಕ್ಷೆ ಬರೆಯುವುದರ ಹಿಂದೆ ಮಕ್ಕಳ ಅಪಾರ ಶ್ರಮವಿರುತ್ತದೆ. ಒಂದು ಬಾರಿ ಬರೆಯುವುದೇ ಕಷ್ಟ. ಕೆಲವರು ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಎರಡು ವರ್ಷಗಳಿಂದ ತರಬೇತಿ ಪಡೆದಿರುತ್ತಾರೆ. ಪರೀಕ್ಷೆ ಬರೆಯುವವರಿಗಷ್ಟೇ ಆ ಕಷ್ಟ ಗೊತ್ತು. ಹಿಂದಿನ ಬೆಂಚಿನ ವಿದ್ಯಾರ್ಥಿಯನ್ನು ವಾಮಮಾರ್ಗದಲ್ಲಿ ಪಾಸ್ ಮಾಡಿದರೆ ಕಷ್ಟಪಟ್ಟು ಓದಿದ ಪ್ರತಿಭಾವಂತ ಮಕ್ಕಳ ಗತಿ ಏನು ಎಂದು ಕೇಳಿದರು.

ನೀಟ್ ಪರೀಕ್ಷಾ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ಹೊಣೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್ ಮಾತನಾಡಿ, ಈ ವರ್ಷ ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ನೀಟ್ ರದ್ದುಗೊಳಿಸಿರುವುದರಿಂದ ಈ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ನೀಟ್ ಅಕ್ರಮಕ್ಕೆ ಕೇಂದ್ರವೇ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ ಮಾತನಾಡಿ, ನೀಟ್ ಪರೀಕ್ಷೆ ರದ್ದು ಮಾಡಿ ಮೊದಲಿನಂತೆ ಆಯಾ ರಾಜ್ಯಗಳಿಗೆ ವೈದ್ಯಕೀಯ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು.ನೀಟ್ ಪರೀಕ್ಷೆಯಲ್ಲಿ ಪದೇ ಪದೇ ಅಕ್ರಮಗಳಾಗುತ್ತಿವೆ.ನೀಟ್ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಕೂಡಲೇ ನೀಟ್ ಪರೀಕ್ಷೆ ರದ್ದು ಮಾಡಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರ ರಾಜ್ಯಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯ ಸೋಮನಾಥ್ ದೊಡ್ಡಮನಿ, ಎನ್ಎಸ್ಯುಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಭೋವಿ, ಕನಕಗಿರಿ ಯುವ ಕಾಂಗ್ರೆಸ್ ಅಧ್ಯಕ್ಷ ದೇವರಾಜ್ ಕಟ್ಟಿಮನಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಚಂದ್ರಶೇಖರ ಉಪ್ಪಾರ, ಯುವ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಿನ್ಮಯ್,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ, ಎನ್ಎಸ್ಯುಐ ತಾಲೂಕಾಧ್ಯಕ್ಷ ಅಂಕಿತ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾಗರಾಜ್, ವಿನೋದಗೌಡ, ಚಂದ್ರು ಕುಂಬಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೃದ್ಯ ಪುಸ್ತಕ ಪ್ರೀತಿ ಬೆಳೆಸಿ ಪುಸ್ತಕ ಸಂಸ್ಕೃತಿ ಬೆಳೆಸಿ ಉತ್ತೇಜಿಸುವ ಅಗತ್ಯವಿದೆ
ಬಂಗಾರಪ್ಪ ನಗರ, ಗಾಂಧಿನಗರ ನಿವಾಸಿಗಳ ಮನೆಗಳ ತೆರವಿಗೆ ತಡೆ