ಹುಬ್ಬಳ್ಳಿ:
ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಎರಡು ದಿನಗಳ ''''''''ಟೈಕಾನ್ ಹುಬ್ಬಳ್ಳಿ -2025'''''''' ವಾರ್ಷಿಕ ವಾಣಿಜ್ಯೋದ್ಯಮ ಶೃಂಗಸಭೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಿಯಾಂಡ್ ಬೆಂಗಳೂರು ಎಂಬುದು ಬರೀ ಘೋಷಣೆಯಾಗಬಾರದು. ಅದು ನೈಜರೂಪಕ್ಕೆ ಬರಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಎರಡನೆಯ ಮತ್ತು ಮೂರನೆಯ ಸ್ತರದ ನಗರಗಳಿಗೆ ಕೈಗಾರಿಕೆಗಳು ಬರಬೇಕು. ಅಂದಾಗ ಅಭಿವೃದ್ಧಿಗೆ ವೇಗ ದೊರೆಯುತ್ತದೆ. ಹಾಗಂತ ಸದ್ಯ ಟೈರ್-2, ಟೈರ್-3 ಸಿಟಿಗಳಲ್ಲಿ ಸ್ಟಾರ್ಟ್ಅಪ್ಗಳಿಗೆ ಯುವ ಸಮೂಹ ಮುಂದೆ ಬರುತ್ತಿಲ್ಲ ಅಂತೇನೂ ಇಲ್ಲ. ಸಾಕಷ್ಟು ಜನ ಯುವ ಸಮೂಹ ಸ್ಟಾರ್ಟ್ಅಪ್ಗಳನ್ನು ತೆರೆಯಲು ಮುಂದೆ ಬರುತ್ತಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ. ಆದರೆ, ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಆ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡಲು ಸಿದ್ಧವಿದೆ ಎಂದರು.ಬಜೆಟ್ನಲ್ಲಿ ಘೋಷಣೆ:
ಐಟಿ ಪಾರ್ಕ್ ನವೀಕರಣ:
ಈ ಪ್ರದೇಶವು ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಹೊಂದಿದೆ. ಆದರೆ, ಅವರಿಗೆ ಸರಿಯಾದ ಕೌಶಲ್ಯ ನೀಡಿದರೆ ಇನ್ನೂ ಉತ್ತಮ ಪ್ರತಿಭಾವಂತರಾಗಿ ಹೊರಹೊಮ್ಮುತ್ತಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದ ಅವರು, ನಾವೀನ್ಯತೆ ಎಂಬುದು ಬರೀ ಬೆಂಗಳೂರಿಗೆ ಸೀಮಿತವಾಗಿಲ್ಲ. ಶೇ. 32 ಸ್ಟಾರ್ಟ್ಅಪ್ಗಳು ಟೈರ್ -2 ಮತ್ತು ಟೈರ್ -3 ನಗರಗಳಿಂದ ಬಂದಿವೆ ಎಂದು ಖರ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಎನ್.ಎಚ್. ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ಮಾಲೀಕ ವಿಎಸ್ವಿ ಪ್ರಸಾದ, ಟೈಕಾನ್ ಅಧ್ಯಕ್ಷ ಡಾ. ವಿವೇಕ ಪಾಟೀಲ, ನಾಗರಾಜ ಕೊಟಗಿ, ವಿಜಯ ಮಾನೆ ಸೇರಿದಂತೆ ಹಲವರಿದ್ದರು.