ಗುರಿ ಸಾಧನೆಯೆಡೆಗೆ ಗಮನ ಇರಲಿ

KannadaprabhaNewsNetwork |  
Published : Sep 20, 2024, 01:46 AM IST
ಪೊಟೋ ಸೆ.19ಎಂಡಿಎಲ್ 1ಎ, 1ಬಿ. 2023-24 ನೇ ಸಾಲಿಗೆ ಬೆಳಗಾವಿ ಆರ್.ಸಿ.ಯು ಗೆ ಪ್ರಥಮ ರ್ಯಾಂಕ್ ಪಡೆದ ದೀಪಾ ಅಮ್ಮಣಗಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು ನಂತರ ಅತಿಥಿಗಣ್ಯರ ಜೊತೆ ವಿದ್ಯಾರ್ಥಿಗಳು ಪೊಟೋ ತೆಗೆಯಿಸಿಕೊಂಡರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯೆಡೆಗೆ ಗಮನವಿರಲಿ ಎಂದು ರಾಮದುರ್ಗ ಸಿ.ಎಸ್.ಬೆಂಬಳಗಿ ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ತೆಗ್ಗಿಹಳ್ಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯೆಡೆಗೆ ಗಮನವಿರಲಿ ಎಂದು ರಾಮದುರ್ಗ ಸಿ.ಎಸ್.ಬೆಂಬಳಗಿ ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ತೆಗ್ಗಿಹಳ್ಳಿ ಹೇಳಿದರು.

ಗುರುವಾರ ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಇಂಗ್ಲಿಷ್‌ ಸ್ನಾತಕೋತ್ತರ 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಬುದ್ಧಿವಂತಿಕೆ ಹಾಗೂ ಕೌಶಲವನ್ನು ಹೆಚ್ಚಿಸಿ, ಜೀವನದ ಹಾದಿಯಲ್ಲಿ ಸಾಗಬೇಕು. ಇದರೊಂದಿಗೆ ಪೋಷಕರು ಹಾಗೂ ಗುರು ಹಿರಿಯರಿಗೆ ಗೌರವವನ್ನು ನೀಡಬೇಕು. ವಿದ್ಯಾರ್ಥಿಗಳ ಬೆಳವಣಿಗೆಗೆ ಪೋಷಕರ ಹಾಗೂ ಗುರುಗಳ ಸಹಕಾರ ಸದಾ ಇರುತ್ತದೆ. ಹಾಗಾಗಿ ಇವರಿಗೆ ಋುಣಿಯಾಗಿರುವುದು ಎಲ್ಲರ ಕರ್ತವ್ಯ. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದರು.

ಕಲಿಕೆ ಎನ್ನುವುದು ನಿರಂತರ, ಕಾಲೇಜಿನಲ್ಲಿ ಕಲಿಯುವುದು ಮುಗಿದರೂ ನಿಮ್ಮ ನಿಜವಾದ ಜೀವನದ ಪಾಠ ಇನ್ನು ಮುಂದೆ ಪ್ರಾರಂಭವಾಗುತ್ತದೆ. ನಿಮ್ಮನ್ನು ನೀವು ಹೇಗೆ ಪ್ರಸ್ತುತಪಡಿಸುತ್ತೀರಿ ಎನ್ನುವುದರ ಮೇಲೆ ನಿಮ್ಮ ಭವಿಷ್ಯ ನಿರ್ಧರಿತವಾಗುತ್ತದೆ. ಹೊಸತನ್ನು ಕಲಿಯುತ್ತಾ ಹೋಗುವುದರ ಮೂಲಕ ಇತರರಿಗಿಂತ ಭಿನ್ನವಾಗುವುದಕ್ಕೆ ಪ್ರಯತ್ನಿಸಬೇಕು. ನಡವಳಿಕೆ ಮತ್ತು ತಾಂತ್ರಿಕತೆಯನ್ನು ಸಮಾನವಾಗಿ ಸಮತೋಲನ ಮಾಡಿಕೊಂಡರೆ ಮಾತ್ರ ಒತ್ತಡವನ್ನು ನಿಭಾಯಿಸಬಹುದು ಎಂದರು.

ಪ್ರಾಚಾರ್ಯ ಪ್ರೊ.ಎಮ್.ವ್ಹಿ.ಜಿಗಬಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಇದುವರೆಗೆ ಕಲಿಕೆಯಲ್ಲಿ ಮತ್ತು ಶಿಸ್ತಿನಲ್ಲಿ ನಿಮ್ಮನ್ನು ತಿದ್ದಿ ತೀಡಿ ಸಚ್ಚಾರಿತ್ರ್ಯವಂತರನ್ನಾಗಿಸುವ ನಿಟ್ಟಿನಲ್ಲಿ ಉಪನ್ಯಾಸಕರು ಸಾಕಷ್ಟು ಶ್ರಮವಹಿಸಿದ್ದಾರೆ. ನಿಮ್ಮ ಜೀವನ ಪಯಣದಲ್ಲಿ ಇದರ ನೆನಪು ಬಂದರೆ ಅವರ ಶ್ರಮ ಸಾರ್ಥಕವಾಗಲಿದೆ ಎಂದು ಹೇಳಿದರು.

ಐಕ್ಯೂಎಸಿ ಸಂಯೋಜಕಿ ಪ್ರೊ.ಎಸ್‌.ಎಸ್‌.ಬಿರಾದಾರ, ಉಪನ್ಯಾಸಕರಾದ ಶಿವಕುಮಾರ ಶಂಕಿನಮಠ, ವಿಶಾಲ ಮಸೂತಿ ವೇದಿಕೆ ಮೇಲಿದ್ದರು. 2023-24 ನೇ ಸಾಲಿಗೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದ ದೀಪಾ ಅಮ್ಮಣಗಿ ಮತ್ತು ಕೆ-ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮುಷ್ಕನ್ ಮುಲ್ಲಾ ಅವರನ್ನು ವಿಭಾಗದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಭೀಮ ಪಡೆಸೂರ ಮತ್ತು ಮುಷ್ಕನ್ ಮುಲ್ಲಾ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು, ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಕೋ-ಆರ್ಡಿನೇಟರ್ ಪ್ರೊ.ಪಿ.ಬಿ.ಬಡಿಗೇರ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಮ್.ಎಚ್.ಜೋಗಿ ವಂದಿಸಿದರು. ಪ್ರೀತಿ ಪೂಜಾರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ