ಗದಗ: ಜಿಲ್ಲೆಯ ಪ್ರೌಢಶಾಲೆ ಮತ್ತು ಪದವಿ ಕಾಲೇಜುಗಳಲ್ಲಿ ಉತ್ತಮ ಮೂಲಭೂತ ಸೌಲಭ್ಯ ಹೊಂದಿದ್ದೇವೆ, ಆದರೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರತಿಯೊಬ್ಬರೂ ಗಮನ ನೀಡಬೇಕು ಎಂದು ಕಾನೂನು, ಸಂಸದೀಯ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶೈಕ್ಷಣಿಕ ಮಟ್ಟ ಎತ್ತರಿಸಲು ಇನ್ನು ಅವಶ್ಯವಿರುವ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತದೆ. ಆದರೆ ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆ ಕಾಣದೇ ಇರುವುದಕ್ಕೆ ಕಾರಣವೇನು ಎನ್ನುವುದನ್ನು ಪ್ರತಿಯೊಬ್ಬರೂ ಪರಾಮರ್ಶೆ ಮಾಡಿಕೊಳ್ಳಬೇಕಿದೆ.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರುವ ಮೂಲಭೂತ ಸಮಸ್ಯೆ ಇತ್ಯರ್ಥ ಪಡಿಸುವುದು, ಆ ಮೂಲಕ ಶೈಕ್ಷಣಿಕ ಮಟ್ಟ ಸುಧಾರಣೆ ಮಾಡುವುದು ಈ ಸಭೆಯ ಉದ್ದೇಶವಾಗಿದೆ. ಇಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಬಿಚ್ಚು ಮನಸ್ಸಿನಿಂದ ನಿಮ್ಮ ಸಮಸ್ಯೆ ಹೇಳಿ, ನೀವು ಯಾರನ್ನೂ ಮೆಚ್ಚಿಸಲು ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ಹೇಳಿದರೆ ಅದನ್ನು ಸಹಿಸುವುದಿಲ್ಲ. ಜಿಲ್ಲೆಯ ಶಾಲೆಗಳಲ್ಲಿ ಶೌಚಾಲಯಗಳ ಬಳಕೆ ಸರಿಯಾಗಿ ಆಗುತ್ತಿಲ್ಲ, ತೀರಾ ಅವ್ಯವಸ್ಥೆಯಿಂದ ಕೂಡಿವೆ ಎನ್ನುವ ಬಗ್ಗೆ ನನಗೆ ಹಲವಾರು ಜನರು ವಾಸ್ತವ ಸ್ಥಿತಿ ತಿಳಿಸಿದ್ದಾರೆ. ಇದರ ಸುಧಾರಣೆಗೆ ಹಿರಿಯ ಅಧಿಕಾರಿಗಳು ಗಮನ ನೀಡಬೇಕು ಎಂದರು.ಸಭೆಯಲ್ಲಿ ಜಿಲ್ಲೆಯಲ್ಲಿ ಕಟ್ಟಡವೇ ಇಲ್ಲದ,ನಿವೇಶನಗಳೇ ಇಲ್ಲದೇ ಇರುವಂತಾ ಒಟ್ಟು 5 ಶಾಲೆಗಳು ಸೇರಿದಂತೆ ಒಟ್ಟು 12 ಸರ್ಕಾರಿ ಶಾಲೆಗಳಿಗೆ ಆಗಷ್ಟ ಅಂತ್ಯದೊಳಗೆ ಜಾಗಾ ಗುರುತಿಸಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು. ನ.14 ರೊಳಗೆ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಕೂಡಾ ಪ್ರಾರಂಭವಾಗಬೇಕು ಇದಕ್ಕೆ ಬೇಕಾಗುವ ಅಗತ್ಯ ಕ್ರಮ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳಬೇಕು. ಇದಕ್ಕೆ ಅಗತ್ಯ ಬಿದ್ದರೆ ಸರ್ಕಾರದ ಹಂತದಲ್ಲಿಯೂ ನಾನು ಪ್ರಯತ್ನಿಸುತ್ತೇನೆ ಎಂದರು.
ಡಿಡಿಪಿಐ ಎಂ.ಎ. ರಡ್ಡೇರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಉನ್ನತೀಕರಿಸುವಲ್ಲಿ ಗುಣಾತ್ಮಕ ಶಿಕ್ಷಣದ ಕುರಿತು ಚಿಂತನೆ ಮಾಡುವ ಅಗತ್ಯತೆಯಿದೆ. ಆದ ಕಾರಣ ಶಿಕ್ಷಕರನ್ನು ಒಂದು ಕಡೆ ಸೇರಿಸಿ ಅವರ ಅಭಿಪ್ರಾಯ ಒಗ್ಗೂಡಿಸಿ ಫಲಿತಾಂಶ ಸುಧಾರಣೆಗಾಗಿ ಸಭೆ ಆಯೋಜಿಸಲಾಗಿದೆ. ದೆಹಲಿ ಶಾಲೆಗಳ ಅಧ್ಯಯನಕ್ಕಾಗಿ ಅಧಿಕಾರಿಗಳ ತಂಡ ತೆರಳಿ ಅಲ್ಲಿನ ಮಾಹಿತಿ ಪಡೆಯಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಮುಖ್ಯಸ್ಥರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬೇಸರ: ಜಿಲ್ಲೆಯ 8 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ ಎನ್ನುವುದು ಸಭೆಯಲ್ಲಿ ಗೊತ್ತಾಗುತ್ತಿದ್ದಂತೆ ಸಚಿವರು ಆಶ್ಚರ್ಯ ವ್ಯಕ್ತಪಡಿಸಿ,ಇದರ ಬಗ್ಗೆ ಕೂಡಲೇ ಗಮನ ಹರಿಸಲು ಸೂಚಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರೌಢ ಶಾಲಾ ಮುಖ್ಯೋಪಾಧ್ಯಯರು ಸಚಿವರು ಕೇಳುತ್ತಿದ್ದ ಪ್ರಶ್ನೆಯೇ ಬೇರೆ, ಅದಕ್ಕೆ ಅವರು ಉತ್ತರ ಕೊಡುತ್ತಿದ್ದದ್ದ ಬೇರೆ, ಇದರಿಂದ ಕುಪಿತಗೊಂಡ ಸಚಿವ ಎಚ್.ಕೆ. ಪಾಟೀಲ ನೀನ್ ಸಾಕ್ ಕುತ್ಕೋಳಪ್ಪ, ಎಲ್ಲ ಪ್ರಶ್ನೆಗೂ ಉತ್ತರಿಸಿದರ ಮಾರ್ಕ್ಸ ಕೊಡುವುದಿಲ್ಲ ಎಂದು ನಗೆ ಚಟಾಕಿ ಮೂಲಕವೇ ಗದರಿದ್ದಲ್ಲದೇ, ಅಲ್ರೀ ಡಿಡಿಪಿಐ ಅವ್ರೇ.. ನಾನ್ ಕೇಳುದೇನ್.. ಅವ್ರು ಹೇಳುದೇನು... ಹಿಂಗಾದ್ರ್ ಹ್ಯಾಂಗ್.. ಎಂದು ಬೇಸರ ವ್ಯಕ್ತ ಪಡಿಸಿದ ಘಟನೆಯೂ ನಡೆಯಿತು.
ಅಧಿಕಾರಿಗಳಿಗೆ ಚುರುಕು: