ಕನ್ನಡಪ್ರಭ ವಾರ್ತೆ ಮೈಸೂರು
ನಗರದ ವಿ.ವಿ. ಮೊಹಲ್ಲಾದ ಮಾತೃಮಂಡಳಿ ವಿದ್ಯಾಸಂಸ್ಥೆಯಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗಲು ಸಾವಿರಾರು ವರ್ಷಗಳು ಬೇಕಾಗುತ್ತದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ಪ್ಲಾಸ್ಟಿಕ್ ತ್ಯಜಿಸಿ, ಕಾಗದ ಹಾಗೂ ಬಟ್ಟೆಯ ಬ್ಯಾಗುಗಳನ್ನು ಬಳಸಿ ಎಂದು ಸಲಹೆ ಮಾಡಿದರು.
ಸರ್ಕಾರ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇಲ್ಲವೇ ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು.ಇಂದಿನಿಂದಲೇ ಪ್ರತಿ ವಿದ್ಯಾರ್ಥಿಯು 10 ಪ್ಲಾಸ್ಟಿಕ್ ತುಂಡುಗಳನ್ನು ಸಂಗ್ರಹಿಸಿ, ಶಾಲೆಯಲ್ಲಿಡಬೇಕು. ಒಂದು ತಿಂಗಳ ನಂತರ ಅದನ್ನು ನಗರಪಾಲಿಕೆಯ ಅಧಿಕಾರಿಗಳನ್ನು ಕರೆಸಿ, ಹಸ್ತಾಂತರಿಸಬೇಕು. ಆ ಮೂಲಕ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಪರಿಸರ ಸಮತೋಲನ ಮುಖ್ಯ. ಪರಿಸರ ಉಳಿದರೆ ಕಾಡು- ನಾಡು ಉಳಿಯುತ್ತದೆ ಎಂದರು.
ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಹೇಮಾ ಬಾಲಚಂದ್ರನ್ ಮಾತನಾಡಿ, ಚಾಕೋಲೇಟ್ ತಿನ್ನುವ ಮಕ್ಕಳು ಅದರ ಪ್ಲಾಸ್ಟಿಕ್ ಕವರನ್ನು ಎಲ್ಲೆಂದರಲ್ಲಿ ಎಸೆಯಬಾರದು. ಅಲ್ಲಿಂದಲೇ ಪ್ಲಾಸ್ಟಿಕ್ ವಿರುದ್ಧದ ಜಾಗೃತಿಯ ಕೆಲಸ ಆಗಬೇಕು ಎಂದರು.
ಕಾವೇರಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಡಾ. ಚಂದ್ರಶೇಖರ್ ಫೌಂಡೇಷನ್ನ ಕಾವೇರಿ ಗ್ರೂಪ್ ಇನ್ಸ್ಟಿಟ್ಯೂಷನ್ ಕಾವೇರಿ ಆಯುರ್ವೇದಿಕ್ ಆಸ್ಪತ್ರೆ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕಾವೇರಿ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ಗುರುವಾರ ವಿವಿಧ ತಳಿಯ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಯೋಜಿಸಲಾಗಿತ್ತು.
ಅಧ್ಯಕ್ಷರು ಹಾಗೂ ಮುಖ್ಯ ಅತಿಥಿಗಳು ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪ್ರತಿ ಮನೆಯಲ್ಲೂ ಕೂಡ ಕನಿಷ್ಠ 2 ಗಿಡಗಳನ್ನು ಬೆಳೆಸುವಂತೆ ಸಲಹೆ ನೀಡಿದರು. ಮೈಸೂರು ನಗರವನ್ನು ಸ್ವಚ್ಛತೆಯಲ್ಲಿ ದೇಶಕ್ಕೆ ಮೊದಲ ಸ್ಥಾನಕ್ಕೆ ಏರಿಸಲು ನಾವೆಲ್ಲರೂ ಕಾರ್ಯಪ್ರವೃತ್ತರಾಗೋಣ ಎಂದು ತಿಲಿಸಿದರು.