ಮೇವಿನ ಕೊರತೆ ನೀಗಿಸಲು ಮೇವು ಬ್ಯಾಂಕ್ ಆರಂಭ

KannadaprabhaNewsNetwork |  
Published : Apr 17, 2024, 01:22 AM IST
16ಎನ್.ಆರ್.ಡಿ2 ಮೇವು ಬ್ಯಾಂಕನ್ನು ತಾಪಂ ಅಧಿಕಾರಿ ಸೋಮಶೇಖರ ಬಿರಾದಾರ ಉದ್ಘಾಟಿನೆ ಮಾಡುತ್ತಿದ್ದಾರೆ. | Kannada Prabha

ಸಾರಾಂಶ

ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸದ್ಯ ಕೊಣ್ಣೂರು ಹೋಬಳಿ ಮಟ್ಟದಲ್ಲಿ ಸುಮಾರು ಎರಡೂವರೆ ಸಾವಿರ ಜಾನುವಾರಗಳಿಗೆ ಮೇವಿನ ಕೊರತೆ ತಪ್ಪಿಸಲು ಮೇವಿನ ಬ್ಯಾಂಕ್ ತೆರಿಯಲಾಗಿದೆ

ನರಗುಂದ: ಬರಗಾಲದಿಂದ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ತಾಲೂಕಾಡಳಿತದಿಂದ ಮೇವಿನ ಬ್ಯಾಂಕ್ ಆರಂಭ ಮಾಡಲಾಗಿದ್ದು, ಪ್ರತಿ ಕೆಜಿ ಮೇವಿಗೆ 2 ರಂತೆ ರೈತರ ಕೈಗೆಟುಕುವ ದರದಲ್ಲಿ ಮೇವು ಮಾರಾಟ ಮಾಡಲಾಗುತ್ತದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ತಹಸೀಲ್ದಾರ ಶ್ರೀಶೈಲ ತಳವಾರ ಹೇಳಿದರು.

ಅವರು ಮಂಗಳವಾರ ತಾಲೂಕಿನ ಕೊಣ್ಣೂರ ಗ್ರಾಮದ ಎಪಿಎಂಸಿ ಆವರಣದಲ್ಲಿ ಜಿಪಂ ಮತ್ತು ತಾಪಂ ವತಿಯಿಂದ 2024-25ನೇ ಸಾಲಿನ ಬರಗಾಲ ಯೋಜನೆಯ ಅಡಿಯಲ್ಲಿ ರೈತರಿಗೆ ರಿಯಾಯತಿ ದರದಲ್ಲಿ ಮೇವು ಪೂರೈಸುವ ಮೇವು ಬ್ಯಾಂಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ತಾಲೂಕಿನಲ್ಲಿ ಬರಗಾಲದಿಂದ ಕುಡಿಯುವ ನೀರು, ಜಾನುವಾರಗಳಿಗೆ ಮೇವಿನ ಕೊರತೆ ನೀಗಿಸಲು ತಾಲೂಕಾ ಡಳಿತ ಯುದ್ದೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸದ್ಯ ಕೊಣ್ಣೂರು ಹೋಬಳಿ ಮಟ್ಟದಲ್ಲಿ ಸುಮಾರು ಎರಡೂವರೆ ಸಾವಿರ ಜಾನುವಾರಗಳಿಗೆ ಮೇವಿನ ಕೊರತೆ ತಪ್ಪಿಸಲು ಮೇವಿನ ಬ್ಯಾಂಕ್ ತೆರಿಯಲಾಗಿದೆ. ಇದರ ಸದೂಪಯೋಗವನ್ನು ಕೊಣ್ಣೂರು ಹೋಬಳಿ ವ್ಯಾಪ್ತಿಗೆ ಬರುವ ವಾಸನ, ಶಿರೋಳ, ಕೊಣ್ಣೂರು, ರೆಡ್ಡರ ನಾಗನೂರು, ಹದಲಿ, ಸುರಕೋಡ ಮತ್ತು ಭೈರನಹಟ್ಟಿ ಗ್ರಾಪಂ ವ್ಯಾಪ್ತಿಯ ರೈತರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಮೇವಿನ ಬ್ಯಾಂಕ್‌ನಿಂದ ಒಂದು ಜಾನುವಾರಿಗೆ ಪ್ರತಿನಿತ್ಯ 6 ಕೆಜಿ ಮೇವನ್ನು ನೀಡಲಾಗುತ್ತದೆ. ಪ್ರತಿ ರೈತರಿಗೆ 50 ಕೆಜಿವರೆಗೂ ಮೇವನ್ನು ವಿತರಿಸಲಾಗುವುದು. ರೈತರು ಒಂದು ಕೆಜಿ ಮೇವನ್ನು ₹2 ಕೊಟ್ಟು ಖರೀದಿ ಮಾಡಬಹುದು. ಇದರಿಂದ ಬರಗಾಲದಲ್ಲಿ ರೈತರ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸಹಕಾರಿಯಾಗುತ್ತದೆ ಎಂದರು.

ಪಶು ಸಂಗೋಪನಾ ಇಲಾಖೆ ತಾಲೂಕು ನಿರ್ದೇಶಕ ಡಾ.ವೆಂಕಟೇಶ ಸಣ್ಣಬಿದರಿ ಮಾತನಾಡಿ, ಮೇವಿನ ಬ್ಯಾಂಕ್‌ನಲ್ಲಿ ಸದ್ಯ 4 ಟನ್ ದಾಸ್ತಾನು ಮಾಡಲಾಗಿದೆ.ಇದರಿಂದ ಮುಂದಿನ ಎರಡ್ಮೂರು ತಿಂಗಳಿಗೆ ಸಾಕಾಗುವಷ್ಟು ಮೇವನ್ನು ಸಂಗ್ರಹ ಮಾಡಿಕೊಳ್ಳಲಾಗಿದೆ. ಈಗಾಗಲೇ ಮೇವು ಪೂರೈಕೆ ಮತ್ತು ಸರಬರಾಜಿಗೆ ಟೆಂಡರ ಕರೆದು ಟೆಂಡರದಾರರನ್ನು ಗುರ್ತಿಸಲಾಗಿದೆ. ಮೇವು ಬ್ಯಾಂಕನಲ್ಲಿ ಮೇವು ಖಾಲಿಯಾದ ಕೂಡಲೇ ಟೆಂಡರದಾರರ ಮೂಲಕ ಮೇವು ದಾಸ್ತಾನು ಕೆಲಸ ಮಾಡಲಾಗುವುದು. ಮೇವು ಬ್ಯಾಂಕ ಪ್ರತಿನಿತ್ಯ ಬೆಳಗ್ಗೆ 10 ಗಂಟೆಯಿಂದ ಸಂಜೆ 5-30ರವರೆಗೆ ತೆರೆದಿರುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೊಣ್ಣೂರು ಗ್ರಾಮದ ರೈತರಾದ ಸಿದ್ದಪ್ಪ ಡಂಬಳ ಮತ್ತು ಅಲ್ಲಿಸಾಬ್‌ ಸುರಕೋಡ ಅವರಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಮೇವಿನ ಗಂಟನ್ನು ವಿತರಿಸುವ ಮೂಲಕ ಮೇವಿನ ಬ್ಯಾಂಕನ್ನು ಉದ್ಘಾಟನೆಗೊಳಿಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ ಗಣಿ, ಟಿ.ಆರ್.ಪಾಟೀಲ್ ಗ್ರಾಮ ಆಡಳಿತ ಅಧಿಕಾರಿ ಜಿ.ಎ.ನಿರಾಣಿ, ಕಂದಾಯ ನಿರೀಕ್ಷಕ ಐ.ವೈ. ಕಳಸಣ್ಣವರ, ಗ್ರಾಪಂ ಸಿಬ್ಬಂದಿ ವರ್ಗ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ