ಕನ್ನಡಪ್ರಭ ವಾರ್ತೆ ಖಾನಾಪುರ
ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಶನಿವಾರ ಆಯ್ದ ರೈತ ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಮತ್ತು ಮ್ಯಾಟ್ ವಿತರಿಸಿ ಮಾತನಾಡಿದ ಅವರು, ತಾಲೂಕಿನ ಪಶು ಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆ ಬಹಳಷ್ಟಿದೆ. ಇದ್ದ ಸಿಬ್ಬಂದಿಯ ಪೈಕಿ ಮೂವರನ್ನು ತಾಲೂಕಿನಿಂದ ಹೊರಗೆ ನಿಯೋಜನೆ ಮಾಡಲಾಗಿದೆ. ಆದರೂ ಸಧ್ಯ ಕಾರ್ಯನಿರ್ವಹಿಸುತ್ತಿರುವ ಪಶು ವೈದ್ಯಾಧಿಕಾರಿಗಳು ಲಭ್ಯವಿರುವ ಮಾನವ ಸಂಪನ್ಮೂಲಗಳನ್ನು ಬಳಸಿಕೊಂಡು ಜಾನುವಾರುಗಳಿಗೆ ಚಿಕಿತ್ಸೆ ಮಾಡುತ್ತಿದ್ದಾರೆ. ತಾಲೂಕಿನ ಸಿಬ್ಬಂದಿ ಕೊರತೆಯ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಸಿಬ್ಬಂದಿ ಕೊಡುವಂತೆ ಇಲಾಖೆ ಮಂತ್ರಿಗಳ ಮೂಲಕ ಮುಖ್ಯಸ್ಥರ ಮೇಲೆ ಒತ್ತಡ ಹೇರಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಮನೋಹರ ದಾದ್ಮಿ, ವೈದ್ಯಾಧಿಕಾರಿಗಳಾದ ಡಾ.ಉಮೇಶ ಹೊಸೂರ, ಡಾ.ಗಂಗಾಧರ ಬಾಳಗಟ್ಟಿ ಸೇರಿ ವೈದ್ಯಾಧಿಕಾರಿಗಳು, ಸಿಬ್ಬಂದಿ, ರೈತರು, ಫಲಾನುಭವಿಗಳು ಇದ್ದರು.