ಕನ್ನಡಪ್ರಭ ವಾರ್ತೆ ಬೀದರ್
ಅವರು ಸೋಮವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ, ಕರ್ನಾಟಕ ಸಂಭ್ರಮ-50 ಅಂಗವಾಗಿ ಹಮ್ಮಿಕೊಂಡಿದ್ದ ಜನಪರ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಯು ಗ್ರಾಮೀಣ ಭಾಗದ ಬಡವರು, ಹಿಂದುಳಿದವರು ಮತ್ತು ದಲಿತರಲ್ಲಿ ಉಳಿದಿದೆ. ಹಾಗಾಗಿ ಈ ಕಲೆಯನ್ನು ಮುಂದಿನ ಯುವ ಪೀಳಿಗೆಗೆ ಮುಂದುವರಿಸಿಕೊಂಡು ಹೋಗಲು ಅವರಿಗೂ ಕಲಿಸಬೇಕು. ಇಂದಿನ ಕಲೆಯಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ. ಹಿಂದೆ ನಮ್ಮ ತಾತ, ಅಜ್ಜಿಯರು ನಮಗೆ ಹಲವಾರು ಜನಪದ ಹಾಡುಗಳನ್ನು ಕಲಿಸುತ್ತಿದ್ದರು ಎಂದರು.ಹಳ್ಳಿಗಳಲ್ಲಿ ನಾಟಕ ಕೋಲಾಟ. ಭಜನೆ ಪದಗಳನ್ನು ನಾವು ಹಿಂದೆ ಕುಳಿತು ಕೇಳುತ್ತಿದ್ದೇವು. ಈಗ ಇಂಥಹ ಕಲೆಗಳು ನಶಿಸುತ್ತಿದ್ದು, ಅದನ್ನು ಕಲಾವಿದರಾದ ತಾವುಗಳು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಈ ಹಿಂದೆ ಕಲಾವಿದರಿಗೆ ನೀಡುತ್ತಿದ್ದ ಎರಡು ಸಾವಿರ ಮಾಶಾಸನವನ್ನು 3000 ರುಪಾಯಿ ಮಾಡಿದ್ದೇನೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜನಪರ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಕಲಾವಿದರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಪ್ರತಿಭಾವಂತ ಕಲಾವಿದರನ್ನು ಗುರುತಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಶಂಬುಲಿಂಗ ವಾಲದೊಡ್ಡಿ, ಬೀದರ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂಎಸ್ ಮನೋಹರ, ಹಿರಿಯರಾದ ಮಾರುತಿ ಕಂಠಿ, ಸಾಹಿತಿಗಳಾದ ಎಸ್ಬಿ ಕುಚಬಾಳ ಸೇರಿದಂತೆ ಬೀದರ್ ಜಿಲ್ಲೆ ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ ಆಗಮಿಸಿದ ವಿವಿಧ ಕಲಾವಿದರು ಭಾಗವಹಿಸಿದ್ದರು.