ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಮನುಜ ಮತ ಸೇವಾ ಟ್ರಸ್ಟ್ ಹಾಗೂ ಜನಕಲರಂಗ ಸಂಘದಿಂದ ಆಯೋಜಿಸಿದ್ದ ಯುವಜನರ ನಡಿಗೆ ಜನಪದದ ಕಡೆಗೆ ಕಾರ್ಯಕ್ರಮವನ್ನು ಕಂಜರ ನುಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ ಎಂದು ವಿಷಾದಿಸಿದರು.ಜಾನಪದ ಕಲಾ ಪ್ರಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಗಾಯಕ ಹುರಗಾಲವಾಡಿ ರಾಮಯ್ಯ ಹಾಗೂ ಮೇಲ್ಕಂಡ ಸಂಘ-ಸಂಸ್ಥೆಗಳು ಮಾಡುತ್ತಿರುವ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಾಮಿ ವಿವೇಕಾನಂದ ಯುವ ಸಂಸ್ಕೃತಿಕ ಮತ್ತು ಕ್ರೀಡಾ ಸಂಘ ಕಳೆದ ಹತ್ತು ವರ್ಷಗಳಿಂದ ಯುವಜನರಿಗೆ ಜನಪದದ ಬಗ್ಗೆ ಆಸಕ್ತಿ ತೋರುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ ಎಂದರು.