ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ

KannadaprabhaNewsNetwork |  
Published : May 19, 2024, 01:53 AM IST
ಕಾರ್ಯಕ್ರಮವನ್ನು ಜನಪದ ಕಲಾವಿದ ಗವಿಸಿದ್ಧಯ್ಯ ಹಳ್ಳಿಕೇರಿಮಠ ಉದ್ಘಾಟಿಸಿದರು.  | Kannada Prabha

ಸಾರಾಂಶ

ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು

ಗದಗ: ಜನಪದ ಸಾಹಿತ್ಯ ಕೇವಲ ಸಾಹಿತ್ಯದ ಒಂದು ಭಾಗವಾಗಿರದೆ ಜನರ ಜೀವನವೇ ಆಗಿದೆ, ನಮ್ಮ ನಾಡು ನುಡಿ, ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿದೆ. ಇಂದಿನ ಯುವಕರು ಆಧುನಿಕ ಜನಪ್ರಿಯ ಗೀತೆಗಳಿಗೆ ಮಾರು ಹೋಗದೆ ಮೂಲ ಜನಪದ ಸಾಹಿತ್ಯದ ಉಳಿವಿಗೆ ಕೈಜೋಡಿಸಬೇಕೆಂದು ಜನಪದ ಕಲಾವಿದ ಗವಿಸಿದ್ಧಯ್ಯ ಹಳ್ಳಿಕೇರಿಮಠ ಹೇಳಿದರು.

ಅವರು ಗದಗ ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಿಳಾ ಸಂಘದ ಆಶ್ರಯದಲ್ಲಿ ಅವಿರ್ಭಾವ ಸಾಂಸ್ಕೃತಿಕ ಹಬ್ಬ ಮುಕ್ತಾಯ ಸಮಾರಂಭವದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಕಾಲೇಜುಗಳಲ್ಲಿ ಸಾಂಸ್ಕೃತಿಕ ಹಬ್ಬದಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜನಪದ, ಸಾಹಿತ್ಯಾಭಿರುಚಿ ಬೆಳೆಯುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸಾಂದರ್ಭಿಕವಾಗಿ ಸ್ವಾಮಿ ವಿವೇಕಾನಂದರು. ರೈತರ ಬೆವರ ಹನಿಯ ಬಗ್ಗೆ ಹೇಳಿದ ಘಟನೆ ಸ್ಮರಿಸಿಕೊಂಡು ರೈತಗೀತೆ ಹಾಡಿ ರೈತರ ಪರಿಶ್ರಮ ಪರಿಚಯಿಸಿದರು. ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾ.ಎಂ.ಎಂ.ಬುರಡಿ ಮಾತನಾಡಿ, ಹಲವು ವಿಷಯ, ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮಾತನಾಡಿದರು. ಈರಮ್ಮ ಅಂಗಡಿ ಹಾಗೂ ಸಂಗಡಿಗರ ಪ್ರಾರ್ಥಿಸಿದರು.

ಆನಂದ ದೇಸಾಯಿಪಟ್ಟಿ ಸ್ವಾಗತಿಸಿ ಪರಿಚಯಿಸಿದರು. ವಿನಯ ಮರಡೂರ ವಿದ್ಯಾಥಿಗಳ ಸತ್ಕಾರ ಸಮಾರಂಭ ನಿರೂಪಿಸಿದರು. ಕೆ.ಎಸ್.ಅಣ್ಣಿಗೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು. ಶ್ವೇತಾ ವಂದಿಸಿದರು. ಕೆ.ವಿ.ಬಾಗಲಕೋಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ