ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಸ್ಪರ್ಧೆಯಲ್ಲಿ ಪಟ್ಟಣದ ಅಂಚೆ ಕಚೇರಿಯ ನೌಕರ ಎಚ್.ಆರ್.ಗಣೇಶ್ ಪ್ರಥಮ, ಟಾಪರ್ ಕಾಲೇಜಿನ ವಿದ್ಯಾರ್ಥಿ ತರುಣ್ ಕುಮಾರ್(ಮೆಣಗನಹಳ್ಳಿ) ದ್ವಿತೀಯ, ಹರದನಹಳ್ಳಿ ಮೊರಾರ್ಜಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬೃಂದ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದರು. ಕಡುವಿನ ಹೊಸಹಳ್ಳಿ ಸರ್ಕಾರಿ ಶಾಲೆಯ ೪ನೇ ತರಗತಿ ವಿದ್ಯಾರ್ಥಿನಿ ನಿಹಾರಿಕಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರಳಾಗಿ ಸಮಾಧಾನಕರ ಬಹುಮಾನ ನಗದು ಹಾಗೂ ಪ್ರಶಸ್ತಿ ಪತ್ರ ಪಡೆದರು.
ಪುರಸಭೆಯ ಮುಖ್ಯಾಧಿಕಾರಿ ಶಿವಶಂಕರ್ ವಿಜೇತರಿಗೆ ಬಹುಮಾನ ವಿತರಿಸಿದರು. ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ ಗುಪ್ತ ಕಾರ್ಯಕ್ರಮ ನಿರೂಪಿಸಿದರು. ಕಸಾಪ ಅಧ್ಯಕ್ಷ ಆರ್. ಬಿ.ಪುಟ್ಟೇಗೌಡ, ಅಂತಾರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ, ನಾಗಲಾಪುರದ ಜನಪದ ಗಾಯಕ ಪುಟ್ಟರಾಜು, ಸಮಿತಿಯ ವನಜಾರ್ ಲಕ್ಷಮ್ಮ ಇದ್ದರು.