ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ, ಗೌರವ ಸನ್ಮಾನ ಕಾರ್ಯಕ್ರಮ

KannadaprabhaNewsNetwork |  
Published : Feb 21, 2025, 11:47 PM IST
21ಜನಪದ | Kannada Prabha

ಸಾರಾಂಶ

ರಾಜ್ಯ ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ನಗರದ ಉಪೇಂದ್ರ ಪೈ ಸ್ಮಾರಕ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯ ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ನಗರದ ಉಪೇಂದ್ರ ಪೈ ಸ್ಮಾರಕ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಆಶಾ ಕುಮಾರಿ ಮಾತನಾಡಿ, ಜಾನಪದವು ವ್ಯಕ್ತಿಗಳಿಗೆ ಜೀವನ ಮೌಲ್ಯ ಮತ್ತು ಸಂಸ್ಕೃತಿಯನ್ನು ಕಲಿಸುವ ದೊಡ್ದ ಪ್ರಕಾರವಾಗಿದೆ. ಈ ಜಾನಪದ ರಂಗದಲ್ಲಿ ಪದಗಳು, ಕ್ರೀಡೆಗಳು, ಸಂಗೀತ, ಹಬ್ಬ ಹರಿದಿನಗಳು ಮತ್ತು ಸಾಹಿತ್ಯವು ಒಳಗೊಂಡಿದ್ದು, ಇದು ಸಮಾಜಕ್ಕೆ ಜೀವನ ಸಂದೇಶ ನೀಡುವ ಶ್ರೇಷ್ಠ ಪ್ರಕಾರವಾಗಿದೆ ಎಂದರು.ಕನ್ನಡ ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಗಣೇಶ ಗಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಜಾನಪದ ಪರಿಷತ್‌ನ ವಿಕಾಸಕ್ಕಾಗಿ ಜಾನಪದ ಪರಿಕಲ್ಪನೆ ಬಗ್ಗೆ ವಿವರಿಸಿ, ಜಾನಪದ ಕ್ಷೇತ್ರದಲ್ಲಿ ಇನ್ನಷ್ಟು ಅಧ್ಯಯನ ನಡೆದು ಅದನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ವಿಯೆಟ್ನಾಂನಲ್ಲಿ ಯೋಗ ಗುರುಗಳಾಗಿ ಸಾಧನೆ ಮಾಡಿದ ದೇವರಾಜ್ ದೇವಾಡಿಗ ನೇರಳಕಟ್ಟೆ ಅವರನ್ನು ಗೌರವಿಸಲಾಯಿತು.ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ತಾಲೂಕು ಪದಾಧಿಕಾರಿ ಪ್ರಭಾರಾವ್, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಉಪನ್ಯಾಸಕ ರಾಘವೇಂದ್ರ ಜಿ.ಜಿ. ವಂದಿಸಿದರು.ಸಭಾ ಕಾರ್ಯಕ್ರಮದ ನಂತರ ಡಾ. ಗಣೇಶ್ ಗಂಗೊಳ್ಳಿ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮ ಮೂಡಿಬಂತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರಿನ ಠಾಣೆಯಲ್ಲಿ ಲಾಕಪ್‌ ಡೆತ್‌!
ವಿಚ್ಛೇದಿತ ಪತ್ನಿ, ಮಗಳ ಮೇಲೆಯೇ ಆ್ಯಸಿಡ್‌ ದಾಳಿ