ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್ಪೋಸ್ಟ್ನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಸೊಗಡಿನ ಜನರ ಬಾಯಿಂದ ಬಾಯಿಗೆ ಸುಲಭವಾಗಿ ತಲುಪಬಹುದಾದ ವಿಶೇಷ ಶಕ್ತಿಯುಳ್ಳ ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ ಎಂದರು.
ಜಾನಪದ ಕಲೆ ನಶಿಸಿ ಹೋಗುತ್ತಿದೆ. ಹೊಸ ಕಾಲಕ್ಕೆ ಜಾನಪದ ಇರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ, ಆಧುನಿಕ ಶೈಲಿಗೆ ಹೊಂದಿಕೊಂಡಿರುವ ಕಾಲೇಜಿನ ವಿದ್ಯಾರ್ಥಿಗಳೂ ಕೂಡ ಮೂಲ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಆಸಕ್ತಿ ತೋರುತ್ತಿರುವುದು ಶ್ಲಾಘನೀಯ ಎಂದರು.ಇಂತಹ ಜನಪದ ಕಲೆ, ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸುವ ಜೊತೆಗೆ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಸ್ಥಾನಕ್ಕೇರಬೇಕು ಎಂದರು.
ಉತ್ಸವದ ಪ್ರಯುಕ್ತ ರೇಷ್ಮೆ ಪಂಚೆ, ಶರ್ಟ್ ಶಲ್ಯ ಧರಿಸಿ ಬಂದಿದ್ದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ದೇವಲಾಪುರ ಹ್ಯಾಂಡ್ಪೋಸ್ಟ್ನಿಂದ ಕಾಲೇಜುವರೆಗೆ ತಮಟೆ ಮೇಳ ಹಾಗೂ ಪೂಜಾ ಕುಣಿತದೊಂದಿಗೆ ಎತ್ತಿನಗಾಡಿ ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದರು. ತಮಟೆಯ ಸದ್ದಿಗೆ ವಿದ್ಯಾರ್ಥಿಗಳ ಜೊತೆಗೂಡಿ ಎಲ್ಲಾ ಪ್ರಾಧ್ಯಾಪಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ನಂತರ ಜಾನಪದ ಶೈಲಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ವೇಳೆ ಕಾಲೇಜಿನ ಸಹಾಯಕ ಪ್ರಧ್ಯಾಪಕರಾದ ವಿ.ಎನ್.ಶರ್ಮಿಳಾ, ಬಿ.ಎಚ್.ಹನುಮಂತಪ್ಪ, ಡಾ.ಕೋಮಲ, ಗಂಗು, ಮಣಿಕಂಠ, ಬಿ.ಟಿ.ಶ್ರೀನಿವಾಸ್, ಅರವಿಂದಮಿತ್ರ, ಡಾ.ಪ್ರಕಾಶ್, ಯತಿರಾಜ್, ಮಂಜುನಾಥ್, ಅತಿಥಿ ಉಪನ್ಯಾಸಕಿ ನೀಲಾಮೂರ್ತಿ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ಇದ್ದರು.