ಕುಷ್ಟಗಿ:
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಸ್ತಿತ್ವದಲ್ಲಿರುವ ಜಾನಪದದ ವಿವಿಧ ಪ್ರಕಾರಗಳು ಜಗತ್ತಿನ ಯಾವುದೇ ದೇಶದಲ್ಲಿ ಕಾಣಸಿಗುವುದಿಲ್ಲ. ಜಾನಪದವೂ ಮಾನವೀಯ ಮೌಲ್ಯ ತಿಳಿಸುತ್ತವೆ ಎಂದರು.
ವಿವಿಧ ಸಂಸ್ಕೃತಿ, ಸಂಪ್ರದಾಯ ಒಳಗೊಂಡಿರುವ ಜಾನಪದಕ್ಕೆ ಹುಟ್ಟು-ಸಾವಿಲ್ಲ. ಈ ದಿಸೆಯಲ್ಲಿ ಯುವಕರು ಯಾಂತ್ರಿಕ ಜೀವನ ಶೈಲಿ ಬದಿಗಿಟ್ಟು, ಜಾನಪದ ಶೈಲಿಯ ಬದುಕು ಕಟ್ಟಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಪ್ರಾಚಾರ್ಯ ಡಾ. ಎಸ್.ವಿ. ಡಾಣಿ ಮಾತನಾಡಿ, ಯುವಕರು ಪಾಶ್ಚಾತ್ಯ ಸಂಸ್ಕೃತಿಯ ಮೋಹಕ್ಕೆ ಒಳಗಾಗಿ ದೇಶಿಯ ಕಲೆ, ಸಂಸ್ಕೃತಿ ಮರೆಯುತ್ತಿದ್ದಾರೆ. ಸಂಸ್ಕೃತಿ ಉಳಿಸಲು, ಹೊಸ ತಲೆಮಾರಿಗೆ ಪರಿಚಯಿಸಲು ಜಾನಪದ ಉತ್ಸವ ಆಯೋಜಿಸಲಾಗಿದೆ ಎಂದರು.
ಸಂಪ್ರದಾಯ ಉಡುಗೊರೆ:
ದೇಶಿಯ ಪದ್ಧತಿಯ ಆಹಾರ ತಯಾರಿಸಿ ಪ್ರದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಜಾನಪದ ಅಕಾಡೆಮಿ ಪ್ರಶಸ್ತಿ ಪುರಷ್ಕೃತ ಬಸಪ್ಪ ಚೌಡ್ಕಿ, ದಾವಲಸಾಬ ಅತ್ತಾರ, ಶರಣಪ್ಪ ಬನ್ನಿಗೋಳ, ಶಿವರಾಯಪ್ಪ ತೆಗ್ಗಿಹಾಳ, ಬಾಬು ದಾವಲಸಾಬ ಅತ್ತಾರ, ನಾಗಪ್ಪ ಜಿರಗಡ್ಡಿ, ನಿಂಗಪ್ಪ ಸೋಮಲಾಪುರ ಅವರು ಜಾನಪದ ಗೀತೆ, ಗೀಗಿಪದ, ಲಾವಣಿಪದ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.