- ಲಕ್ಕವಳ್ಳಿಯಲ್ಲಿ ಜಾನಪದ ಸಾಹಿತಿಗಳ ಬದುಕು ಬರಹ ವಿಚಾರ ಸಂಕಿರಣ
ಜನಪದ ಕಲೆ ಸಾಹಿತ್ಯ ಸಂಗೀತ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತದೆ. ಅಲ್ಲದೆ ಉತ್ತಮ ನಾಗರಿಕತೆ ಕಲಿಸುತ್ತದೆ ಎಂದು ಕುವೆಂಪು ವಿಶ್ವವಿದ್ಯಾನಿಲಯ ನಿವೃತ್ತ ಪ್ರಾಧ್ಯಾಪಕ ಮತ್ತು ಜಾನಪದ ವಿದ್ವಾಂಸ ಡಾ.ಬಸವರಾಜ ನೆಲ್ಲಿಸರ ಹೇಳಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತು ಲಕ್ಕವಳ್ಳಿ, ತರೀಕೆರೆ ತಾಲೂಕು ಘಟಕ ಸಂಯುಕ್ತಶ್ರಯದಲ್ಲಿ ಸಮೀಪದ ಲಕ್ಕವಳ್ಳಿ ಗಣಪತಿ ರಂಗಮಂದಿರದಲ್ಲಿ ನಡೆದ ಜಾನಪದ ಸಾಹಿತಿಗಳ ಬದುಕು-ಬರಹ ವಿಚಾರ ಸಂಕಿರಣ ಮತ್ತು ಜಾನಪದ ಗೀತ ಗಾಯನೋತ್ಸ ಉದ್ಘಾಟಿಸಿ ಮಾತನಾಡಿದರು.ಸಮಾಜದ ಅಂಕುಡೊಂಕುಗಳನ್ನು ತಿದ್ದುವುದಲ್ಲದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕೃಷಿಕರಿಂದ ಮತ್ತು ಮಹಿಳೆಯರಿಂದ ಜಾನಪದ ಕಲೆ ಸಾಹಿತ್ಯ ಸಂಗೀತ ಸದೃಢವಾಗಿ ಬೆಳೆದು ಬಂದಿದೆ. ಇಂದಿನ ಯುವಕ ಯುವತಿಯರು ಅವುಗಳನ್ನು ಪೋಷಿಸಿ ಮುಂದಿನ ತಲೆಮಾರಿಗೆ ಕೊಂಡಯ್ಯಬೇಕಾಗಿದೆ ಎಂದು ಹೇಳಿದರು.,
ಜಾನಪದ ಸಾಹಿತಿ ಇಮ್ರಾನ್ ಅಹಮದ್ ಬೇಗ್ ಮಾತನಾಡಿ ಜಾನಪದ ಪರಿಷತ್ತು ಜಿಲ್ಲೆಯ ಗ್ರಾಪಂ, ಹೋಬಳಿ ತಾಲೂಕು ಜಿಲ್ಲಾ ಮಟ್ಟದಲ್ಲಿ ಇಂದಿನ ದಿನ ಮಾನಸದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆ ಸಾಹಿತ್ಯ ಸಂಗೀತವನ್ನು ತಳಮಟ್ಟದಲ್ಲಿ ಸಂಘಟಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ತರೀಕೆರೆ ತಾಲೂಕು ಅಧ್ಯಕ್ಷ ಆರ್ ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರ್ವಜನಿಕ, ಖಾಸಗಿ ಕಾರ್ಯಕ್ರಮಗಳಲ್ಲಿ ಜಾನಪದ ಕಲೆ, ಸಾಹಿತ್ಯ ಸಂಗೀತಕ್ಕೆ ಆದ್ಯತೆ ನೀಡಿ ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಸಂಚಾಲಕರಾದ ಗಾಯತ್ರಮ್ಮ ಬಿಜೆಪಿ ಮುಖಂಡರಾದ ರಮೇಶ್ ಕಲಾವಿದರಾದ ಚಿಕ್ಕ ನೆಲ್ಲೂರು ಜಯಣ್ಣ, ತಿಪ್ಪೇಶ್, ಸೋಮಶೇಖರ್, ಪಾಂಡುರಂಗ, ಸೀನೋಜಿರಾವ್, ಪಾಂಡು ಜಾದವ್, ಕೃಷ್ಣಪ್ಪ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-