ಸಮಾನತೆ, ಸ್ವಾತಂತ್ರ್ಯ ಪರಿಕಲ್ಪನೆ ಅನುಸರಿಸಿ: ಹೆಗ್ಗನಾಯಕ

KannadaprabhaNewsNetwork |  
Published : Sep 16, 2024, 01:55 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಬ್ರಾದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು | Kannada Prabha

ಸಾರಾಂಶ

ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಅದರ ಮೌಲ್ಯಗಳು ಮತ್ತು ತತ್ವಗಳನ್ನು ಅರಿಯುವುದು ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಮಾಜ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಪರಿಕಲ್ಪನೆ ಅನುಸರಿಸಿಕೊಳ್ಳುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಅದರ ಮೌಲ್ಯಗಳು ಮತ್ತು ತತ್ವಗಳನ್ನು ಅರಿಯುವುದು ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಹೇಳಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿಮ ಅಂಗವಾಗಿ ಭಾನುವಾರ ಸಾಂಬ್ರಾದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಿ, ಅಪ್ಪಿಕೊಂಡಿರುವ ನಾಡಿನ ಜನರಿಂದ ಯಶಸ್ವಿಯಾಗಿ ಈ ಕಾರ್ಯ ನಡೆಸಲು ಯೋಜನೆ ರೂಪಿಸಲಾಗಿದೆ. ಮಾನವ ಸರಪಳಿ ಸಂವಿಧಾನದ ಮೂಲ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಂಕೇತವಾಗಿ ಇರಲಿದ್ದು, ಇದರಲ್ಲಿ ಭಾಗವಹಿಸುವ ಎಲ್ಲರೂ ಕೂಡ ಪ್ರಜಾಪ್ರಭುತ್ವ ಮೂಲ ಆಶಯಗಳ ಕುರಿತು ಸಾರ್ವಜನಿಕ ಸಂದೇಶ ನೀಡಲಿದ್ದಾರೆ ಎಂದು ಹೇಳಿದರು.

ಬೆಳಗಾವಿ ತಾಲೂಕಿನ ಕರಡಿಗುಡ್ಡಿ ಗ್ರಾಮದಿಂದ ಮೋದಗಾ ಗ್ರಾಮದವರೆಗೆ ನಾಗರಿಕರು, ವಿವಿಧ ಯುವ ಸಂಘಟನೆ, ನಿವೃತ್ತ ಸೈನಿಕರು, ಸ್ತ್ರೀ ಶಕ್ತಿ ಸಂಘ, ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಬೃಹತ್ ಮಾನವ ಸರಪಳಿ ನಿರ್ಮಿಸಿದರು.

ಎನ್‌ಸಿಸಿ, ಎನ್ನೆಸ್ಸೆಸ್‌ ಸೌಟ್ಸ್ ಗೌಡ್ಸ್ ವಿದ್ಯಾರ್ಥಿಗಳು ಭಾವಕ್ಯತೆ ಘೋಷಣೆ ಕೂಗಿದರು. ನಿವೃತ್ತ ಸೈನಿಕರು ಹಾಗೂ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಾಷ್ಟ್ರ ಪ್ರೇಮ ಮತ್ತು ಸ್ವಾತಂತ್ರ್ಯವೀರರ ಘೋಷಣೆಗಳ ಭಿತ್ತಿಪತ್ರ ಪ್ರದರ್ಶಿದರು.

ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಹೆಗಡೆ, ಸಹಾಯಕ ನಿರ್ದೇಶಕ ಬಿ.ಡಿ ಕಡೆಮನಿ, ಗ್ರಾಪಂ ಅಧ್ಯಕ್ಷೆ ರಚನಾ ಗಾವಡೆ, ಉಪಾಧ್ಯಕ್ಷ ಮಾರುತಿ ಜೋಗಾನಿ, ಮುಂಖಡರಾದ ರಾಜು ದೇಸಾಯಿ, ಲಕ್ಷ್ಮಣ ದಂಡಾಪುರ, ದಿಶಾ ಸಮಿತಿ ಸದಸ್ಯರಾದ ಸಿದ್ದಲಿಂಗ ಸರೂರ, ನಾಗೇಶ ದೇಸಾಯಿ, ರವಿಕಾಂತ ಸಿ. ಎಂ, ಪ್ರಶಾಂತ ಮುನ್ನವಳ್ಳಿ, ರೇವತಿ ಶಿಂಗೆ, ವಸಂತ ಕುಮಾರ, ರಾನವ್ವ ಮಾದರ, ಗೋಪಾಲ ಗುಡಸಿ, ರಾಜೇಂದ್ರ ಮೊರಬದ, ರಮೇಶ ಹೊಗಾರ, ಅಭಿನಂದನ ಹೊಸಗೌಡರ, ಬೆಳಗಾವಿ ತಾಲೂಕಿನ ನಾಗರಿಕರು, ವಿವಿಧ ಯುವ ಸಂಘಟಣೆ, ನಿವೃತ್ತ ಸೈನಿಕರು, ಸ್ತ್ರೀ ಶಕ್ತಿ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ಗ್ರಾಪಂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಸಾಂಬ್ರಾ ಗ್ರಾಮದಲ್ಲಿ ವಿನೂತನವಾಗಿ ಭಜನೆ, ಡೊಳ್ಳು ಕುಣಿತ, ಮೆರವಣಿಗೆಯಲ್ಲಿ ವೀರಗಾಸ, ಕರಡಿ ಮುಜಲಿ ವಾದ್ಯಗಳನ್ನು ನುಡಿಸುವ ತಂಡಗಳು ಸೇರಿದಂತೆ ವಿವಿಧ ಕಲಾ ತಂಡಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ