ಕನ್ನಡ ಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪುರ ಪೊಲೀಸ್ ಠಾಣೆ ಆವರಣದಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಡೆದ ಜಾಗೃತಿ ಆಟೋ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪಘಾತ ಘಟನೆಗಳಿಂದ ಯುವಕರೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ಮುಂದಿನ ದೇಶದ ಭವಿಷ್ಯದ ನಾಯಕರಾಗಬೇಕಿದ್ದವರು ಜೀವನವನ್ನೇ ಕೊನೆಯಾಗಿಸುತ್ತಿದ್ದಾರೆ. ಅಘಪಾತ ತಪ್ಪಿಸಿ ಯುವ ಸಮೂಹವನ್ನು ರಕ್ಷಿಸುವ ಹೊಣೆಗಾರಿಗೆ ನಮ್ಮದಾಗಿದೆ ಎಂದರು.
ಪ್ರತಿಯೊಬ್ಬ ಪ್ರಯಾಣಿಕರು ಚಾಲನಾ ಪರವಾನಗಿ ಪಡೆದಿರಬೇಕು. ವಾಹನಗಳಿಗೆ ವಿಮೆ, 18 ವರ್ಷ ಒಳಪಟ್ಟ ಮಕ್ಕಳಿಗೆ ವಾಹನಗಳನ್ನು ನೀಡಬಾರದು, ಕುಡಿದು ವಾಹನ ಓಡಿಸಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಅಪಘಾತದಿಂದ ಪರಾಗಬೇಕು ಎಂದರು.ಯಾವುದೇ ಪ್ರಕೃತಿ ವಿಕೋಪದಲ್ಲಿ ಸಂಭವಿಸಿದಷ್ಟು ಸಾವು ನೋವುಗಳು ಅಪಘಾತಗಳಿಂದ ಸಂಭವಿಸುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಈ ಮಾರಣ ಹೋಮವನ್ನು ತಪ್ಪಿಸಿಕೊಳ್ಳಬಹುದು. ಇದರ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದು ತಿಳಿವಳಿಕೆ ನೀಡಿದರು.
ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ರಸ್ತೆ ದಾಟುವಾಗ, ಬರುವಾಗ, ಬಸ್ ಹತ್ತುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಒಂದು ಕ್ಷಣದಲ್ಲಿ ಆಗುವ ಅಪಘಾತಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ ಎಂದರು.