ವಿಷ್ಣು ಅಭಿಮಾನಿಗಳಿಂದ ಅನ್ನಸಂತರ್ಪಣೆ

KannadaprabhaNewsNetwork |  
Published : Jan 01, 2024, 01:15 AM IST
75 | Kannada Prabha

ಸಾರಾಂಶ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 141ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶನಿವಾರ ನಗರದ ನೆಹರು ವೃತ್ತದ ಬಳಿ ವಿಷ್ಣ ಅಭಿಮಾನಿ ಬಳದ ವತಿಯಿಂದ ಅನ್ನಸಂತರ್ಪಣೆ

ಕನ್ನಡಪ್ರಭ ವಾರ್ತೆ ನಂಜನಗೂಡು

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 141ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶನಿವಾರ ನಗರದ ನೆಹರು ವೃತ್ತದ ಬಳಿ ವಿಷ್ಣ ಅಭಿಮಾನಿ ಬಳದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಪಂ ಮಾಜಿ ಸದಸ್ಯ ಹಾಗೂ ತಾಲೂಕು ಕಸಾಪ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕನ್ನಡಿನ ಸಾಂಸ್ಕೃತಿಕ ಲೋಕಕ್ಕೆ ಡಾ. ವಿಷ್ಣುವರ್ಧನ್ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ನಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಕ್ರಮಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಸಜ್ಜನ ನಟರಲ್ಲಿ ಅವರೂ ಒಬ್ಬರಾಗಿದ್ದರು. ಅನೇಕ ಚಲಚಿತ್ರಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಚಿತ್ರಗಳಲ್ಲಿ ಅವರು ನಟಿಸಿ ಯುವಕರನ್ನು ಸರಿದಾರಿಯಲ್ಲಿ ಮುನ್ನಡೆಸುತ್ತಿದ್ದಾಗಿ ಹೇಳಿದರು.

ಈ ವೇಳೆ ನಗರಸಭಾ ಆಯುಕ್ತ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹದೇವಪ್ರಸಾದ್, ಮಹೇಶ್, ಗಜೇಂದ್ರ, ವೆಂಕಟೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌