ಬಳ್ಳಾರಿಯಲ್ಲಿ ಆಹಾರ ಗುಣಮಟ್ಟ ತಪಾಸಣೆ

KannadaprabhaNewsNetwork |  
Published : Sep 04, 2024, 01:46 AM IST
ಆಹಾರ ಸುರಕ್ಷತೆ ಅಧಿಕಾರಿಗಳು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ತಪಾಸಣೆ ನಡೆಸಿದರು. | Kannada Prabha

ಸಾರಾಂಶ

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಆಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ತಪಾಸಣೆ ನಡೆಸಿದರು.

ಬಳ್ಳಾರಿ: ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಆಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ತಪಾಸಣೆ ನಡೆಸಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಂಶಗಳನ್ನು ಪಾಲಿಸದೇ ಇರುವ ಹಾಗೂ ಆಹಾರ ನಿರ್ವಾಹಕರ ವೈಯಕ್ತಿಕ ಸ್ವಚ್ಛತೆ, ಆಹಾರದಲ್ಲಿ ಬಳಸುತ್ತಿರುವ ಕೃತಕ ಬಣ್ಣ, ಅಜಿನೋಮೋಟೊ (ಟೇಸ್ಟಿಂಗ್ ಪೌಡರ್), ಆಹಾರ ತಯಾರಿಸಲು ಬಳಸುತ್ತಿರುವ ನೀರು, ಗ್ರಾಹಕರಿಗೆ ಕುಡಿಯಲು ನೀಡುತ್ತಿರುವ ನೀರು ಮತ್ತು ನೋಂದಣಿ ಅಥವಾ ಪರವಾನಗಿ ಪಡೆದಿರುವ ಮಾಹಿತಿ ಕಲೆ ಹಾಕಿದರು.

ಹತ್ತು ಆಹಾರ ಪದಾರ್ಥಗಳ ಮಾದರಿಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವಿಶ್ಲೇಷಣೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವಿಶ್ಲೇಷಣಾ ವರದಿ ಬಂದ ಆನಂತರ ಆಹಾರ ಸುರಕ್ಷತೆ ಮತ್ತುಗುಣಮಟ್ಟ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆಹಾರ ಸುರಕ್ಷತೆ ಅಧಿಕಾರಿ ನಂದಾಕಡಿ ಅವರು ತಿಳಿಸಿದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತಾ ಅಧಿಕಾರಿ ಪ್ರಕಾಶ್ ಎಸ್‌. ಪುಣ್ಯಶೆಟ್ಟಿ ಅವರ ಆದೇಶದ ಮೇರೆಗೆ ತಪಾಸಣೆ ಸಮಯದಲ್ಲಿ ಕಂಡುಬಂದ ಲೋಪಗಳಿಗೆ ನಿಯಮಾನುಸಾರ ತಿಳಿವಳಿಕೆಯ ಪತ್ರವನ್ನು ಆಹಾರ ಉದ್ದಿಮೆದಾರರಿಗೆ ನೀಡಲಾಗಿದ್ದು, ದಂಡ ಸಹ ವಿಧಿಸಲಾಗಿದೆ. ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದ ಲೋಪ-ದೋಷಗಳನ್ನು ಒಂದು ವಾರದೊಳಗೆ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಈ ವೇಳೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!