ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿ ಊಟ ನೀಡುವ ಶಾಲೆಗಳು, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು, ಅಂಗನವಾಡಿಗಳು ತಪ್ಪದೇ ಆಹಾರ ಸುರಕ್ಷತೆಯ ನೋಂದಣಿ ಮಾಡಿಕೊಳ್ಳಬೇಕು. ಮಕ್ಕಳಿಗೆ ಊಟ ತಯಾರಿಸುವ ಬಾಣಸಿಗರು ಹಾಗೂ ಬಡಿಸುವರ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು. ಬಳಸುವ ನೀರಿನ ಪರೀಕ್ಷೆ ಮಾಡಿಸಬೇಕು. ಅಡುಗೆಗೆ ಬಳಸುವ ಆಹಾರ ಪದಾರ್ಥಗಳ ಗುಣಮಟ್ಟದ ಜೊತೆಗೆ ಸ್ಪಚ್ಛತೆಗೂ ಆದ್ಯತೆ ನೀಡಬೇಕು. ಆಹಾರ ಸುರಕ್ಷತೆ ಪ್ರಮಾಣ ಪತ್ರ ಪಡೆಯುವುದರಿಂದ ಅಡುಗೆ ತಯಾರಕರು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬಹುದು ಎಂದರು.ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪಾಲಾಕ್ಷ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೆ 450 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು, ಇನ್ನೂ ಸುಮಾರು 2,000 ಶಾಲೆಗಳ ನೋಂದಣಿ ಬಾಕಿಯಿದೆ. ಶಾಲೆ, ಹಾಸ್ಟೆಲ್, ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಸುರಕ್ಷತೆ ಹಾಗೂ ಪಾಲಿಸಬೇಕಾದ ನಿಯಮಗಳ ಕುರಿತು ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈ ಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೋಟೆಲ್ ಹಾಗೂ ಬೀದಿ ಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ನಿಯಮಿತವಾಗಿ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
೨ ಅಂಗನವಾಡಿ ಮಾತ್ರ ನೋಂದಣಿ