ಮಹಾ ಶಿವರಾತ್ರಿ ನಿಮಿತ್ತ ನುಗ್ಗೇಹಳ್ಳಿ ಪಂಚಲಿಂಗೇಶ್ವರ ಸಮಿತಿಯಿಂದ ಪಾದಯಾತ್ರೆ

KannadaprabhaNewsNetwork |  
Published : Mar 04, 2024, 01:16 AM IST
3ಎಚ್ಎಸ್ಎನ್7 : ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪರಮ ಪವಿತ್ರ ಪಾದಯಾತ್ರೆಯನ್ನು ಕೈಗೊಂಡಿತು. | Kannada Prabha

ಸಾರಾಂಶ

ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದೆ.

12ನೇ ವರ್ಷದ ಕಾರ್ಯಕ್ರಮ

ನುಗ್ಗೇಹಳ್ಳಿ: ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದೆ.

ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಪಾದಯಾತ್ರೆ ಸೇವಾ ಸಮಿತಿ ಅಧ್ಯಕ್ಷ ಎನ್‌ಸಿ ರಾಮಕೃಷ್ಣ (ಹೋಟೆಲ್ ರಾಜಣ್ಣ ) ಮಾತನಾಡಿ, ಕಳೆದ 12 ವರ್ಷಗಳಿಂದ ಸೇವಾ ಸಮಿತಿ ವತಿಯಿಂದ ಪಾದಯಾತ್ರೆಯನ್ನು ಕೈಗೊಳ್ಳಲಾಗುತ್ತಿದ್ದು ಈ ಬಾರಿಯ ಪಾದಯಾತ್ರೆಗೆ ಸುಮಾರು 150ಕ್ಕೂ ಹೆಚ್ಚು ಜನರು ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸುಮಾರು ಆರು ದಿನಗಳ ಕಾಲ ಪಾದಯಾತ್ರೆಯನ್ನು ಕೈಗೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ಮಹಾಶಿವರಾತ್ರಿ ದಿನ ಮಹಾಪೂಜೆಯಲ್ಲಿ ದರ್ಶನ ಮಾಡಲಾಗುತ್ತದೆ. ಸೇವಾ ಸಮಿತಿ ವತಿಯಿಂದ ಪಾದಯಾತ್ರಿಗಳ ಸುರಕ್ಷತೆಗಾಗಿ ಹೆಚ್ಚು ಗಮನಹರಿಸಲಾಗುತ್ತದೆ ಎಂದರು.

ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಹೆಚ್ಚಿನ ಸಹಕಾರ ಸೇವೆ ನೀಡುತ್ತಿರುವ ಶಾಂತಿಗ್ರಾಮ ಸಮೀಪದ ಕಾರೇಕೆರೆ ಗೇಟ್‌ನ ಶೇಖರ್ ದಂಪತಿಯನ್ನು ಸನ್ಮಾನಿಸಲಾಯಿತು. ಪಾದಯಾತ್ರೆಯ ಅನ್ನ ದಾಸೋಹ ಕಾರ್ಯಕ್ಕೆ ಅನುಕೂಲವಾಗಲೆಂದು ವಾಹನದ ವ್ಯವಸ್ಥೆಯನ್ನು ನುಗ್ಗೇಹಳ್ಳಿ ಗ್ರಾಮದ ವಿನಯ್ ಮಾಡಿದರು. ಭಕ್ತರಿಗೆ ಆರೋಗ್ಯದ ಸುರಕ್ಷತೆಗಾಗಿ ಚನ್ನರಾಯಪಟ್ಟಣ ಸಾರ್ವಜನಿಕ ಆಸ್ಪತ್ರೆ ವೈದ್ಯ ಡಾ. ರವಿ ಔಷಧಿಗಳ ವ್ಯವಸ್ಥೆಯನ್ನು ಮಾಡಿದ್ದರು.

ಪಾದಯಾತ್ರೆ ಸೇವಾ ಸಮಿತಿ ಉಪಾಧ್ಯಕ್ಷ ಮುದ್ದನಹಳ್ಳಿ ರಾಜಣ್ಣ, ಕಾರ್ಯದರ್ಶಿ ಬೆಳಗುಲಿ ದೊಡ್ಡೇಗೌಡ, ಖಜಾಂಚಿ ವಿಮಲ್ ಸೆಟ್, ಗೌರವ ಅಧ್ಯಕ್ಷರಾದ ಎನ್.ಎಸ್. ಗಿರೀಶ್, ರವಿಶಾಚಾರ್, ವಿಜಯಲಕ್ಷ್ಮಿ ಜಗದೀಶ್, ಸಮಿತಿಯ ಸದಸ್ಯರಾದ ಮೈಕ್ ಸೆಟ್ ಕೃಷ್ಣ, ಗಣೇಶ್ ಯಾದವ್, ಲೋಕೇಶ್, ಮಹೇಶ್, ಒಂಟಿ ಮಾವಿನಹಳ್ಳಿ ಮಂಜಣ್ಣ, ಸುನಿಲ್, ಸ್ವಾಮಿ ಸಂತೇ ಶಿವರ ಹಾಜರಿದ್ದರು.

ನುಗ್ಗೇಹಳ್ಳಿಯ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂಬದಿ ರಾಜಕೀಯ ಬಿಟ್ಟು ಚುನಾವಣೆ ನಡೆಸಲಿ: ಹಾರೋಹಳ್ಳಿ ಕೃಷ್ಣ
150 ವಸಂತ ಪೂರೈಸಿರುವ ಸರ್ಕಾರಿ ಶಾಲೆ ಬಲವರ್ಧನೆ ಮಾಡಿ: ಕೆ.ಆರ್.ಶ್ರೀನಿವಾಸ್