ಮಕ್ಕಳ ಬೇಡಿಕೆಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಮಹೇಶ್ ಆದೇಶ

KannadaprabhaNewsNetwork |  
Published : Jan 29, 2025, 01:32 AM IST
70 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಪ್ರತಿ ವರ್ಷ ಗ್ರಾಪಂ ಮೂಲಕ ಮಕ್ಕಳ ಹಕ್ಕುಗಳನ್ನ ರಕ್ಷಿಸುವ ಮಹತ್ವಾಕಾಂಕ್ಷೆಯ ಮಕ್ಕಳ ಗ್ರಾಮ ಸಭೆಯನ್ನು ಸ್ಥಳೀಯಾಗಿ ಸಮಗ್ರ ಅನುಷ್ಠಾನ

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಅಣ್ಣೂರು ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳಿಗೆ, ಶಾಲಾ ಸಮಿತಿ ಸದಸ್ಯರಿಗೆ ಮತ್ತು ಪೋಷಕರಿಗೆ ಮಕ್ಕಳ ಗ್ರಾಮ ಸಭೆ ನಡೆಯಿತು.

ಸಭೆಯಲ್ಲಿ ಕೆ. ಎಡತೊರೆ ಶಾಲೆಯ ವಿದ್ಯಾರ್ಥಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಿಗೆ ನಮ್ಮ ಊರಿನ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಿ ಎಂದು ಕೇಳಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಉಪಾಧ್ಯಕ್ಷ ಮಹೇಶ್ ಎಡತೊರೆ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ ನಾಗ್ ಸ್ಥಳದಲ್ಲಿಯೇ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮದ ನೀರಿನ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಆದೇಶಿಸಿದರು.

ಮತ್ತೆ ಉಳಿದ ಕಾಂಪೌಂಡ್, ಮೈದಾನ, ಸ್ಮಾರ್ಟ್ ಕ್ಲಾಸ್, ಲೈಬ್ರರಿ ವಿಷಯಗಳ ಬಗ್ಗೆ ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ಗ್ರಾಮ ಸಭೆಯ ಬಗ್ಗೆ ಉಮೇಶ್ ಬಿ. ನೂರಲಕುಪ್ಪೆ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ವರ್ಷ ಗ್ರಾಪಂ ಮೂಲಕ ಮಕ್ಕಳ ಹಕ್ಕುಗಳನ್ನ ರಕ್ಷಿಸುವ ಮಹತ್ವಾಕಾಂಕ್ಷೆಯ ಮಕ್ಕಳ ಗ್ರಾಮ ಸಭೆಯನ್ನು ಸ್ಥಳೀಯಾಗಿ ಸಮಗ್ರ ಅನುಷ್ಠಾನ ಮಾಡುವಂತೆ ನ. 14 ರಿಂದ ಜನವರಿ 26 ರವರೆಗೆ ಎಲ್ಲ ಶಾಲೆಯ ಮಕ್ಕಳು ಸಭೆಯಲ್ಲಿ ಭಾಗವಹಿಸಿ ಅವರ ಸಮಸ್ಯೆಯನ್ನು ಚರ್ಚಿಸುವಂತೆ ಅವಕಾಶ ಮಾಡಲಾಗಿದ್ದು, ಇದರ ಸದುಪಯೋಗವನ್ನು ಪಡೆಯುವಂತೆ ಮಕ್ಕಳ ಸಲುವಾಗಿ ಇರುವ ಹಕ್ಕುಗಳು ಮತ್ತು ಅದನ್ನ ರಕ್ಷಿಸುವ ವಿಧಾನದ ಬಗ್ಗೆ ಮಕ್ಕಳೊಂದಿಗೆ ಚರ್ಚಿಸಿದರು.

ಅಭಿವೃದ್ಧಿ ಅಧಿಕಾರಿ ಸಂತೋಷ ನಾಗ್, ಪೀಪಲ್ ಟ್ರೀ ರುದ್ರಪ್ಪ, ಡ್ರೀಮ್ ಇಂಡಿಯಾ ಸಚ್ಚಿನ್ ಅವರು ಮಕ್ಕಳ ಹಕ್ಕು ಶಿಕ್ಷಣ ಮತ್ತು ಮೂಲಭೂತ ಸಮಸ್ಯೆಗಳ ಪರಿಹಾರವಾಗಿ ಮಾತಾನಾಡಿದರು.

ಗ್ರಾಪಂ ಅಧ್ಯಕ್ಷೆ ಜಯಮ್ಮ, ಎಸ್.ವಿ.ಎಂ. ಶಿವಲಿಂಗು, ಕಾರ್ಯದರ್ಶಿ ಮೋಹನ್, ಸದಸ್ಯರಾದ ಶಶಿಕುಮಾರ್, ಚಿಕ್ಕಮ್ಮ, ಜಯಲಕ್ಷ್ಮಿ, ಮುಖ್ಯ ಶಿಕ್ಷಕರಾದ ಸುಮ, ಮಂಗಳ, ಸೌಮ್ಯಶ್ರೀ, ಪೂರ್ಣಿಮಾ, ರವಿಕುಮಾರ್, ಕುಳ್ಳಯ್ಯ, ಕಾವ್ಯ, ಮಮತ, ಚೆನ್ನಬಸಪ್ಪ, ಜವರೇಗೌಡ ಮತ್ತು ಶಾಲಾ ಮಂತ್ರಿಮಂಡಲದ ಮಕ್ಕಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!