- ದೇವರಹಳ್ಳಿಯಲ್ಲಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿಕೆ । ನೂತನ ಗೋದಾಮು ಉದ್ಘಾಟನೆ
* ಮಾಜಿ ಶಾಸಕರೇನಂದ್ರು?- ಉಡುಗಿರಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯ ಬಳಿ ಸುಸಜ್ಜಿತ ಕಲ್ಯಾಣ ಮಂಟಪಕ್ಕಾಗಿ ₹5 ಕೋಟಿ ಮಂಜೂರು ಮಾಡಿಸಲಾಗಿತ್ತು
- ಈಗಿರುವ ಶಾಸಕರು ಇನ್ನೊಂದು ವರ್ಷದಲ್ಲಿ ಕಲ್ಯಾಣ ಮಂಟಪ ಕಾಮಗಾರಿ ಪೂರ್ಣಗೊಳಿಸಿ, ಅವರೇ ಉದ್ಘಾಟನೆಗೊಳಿಸಲಿ- ತರಕಾರಿ ರೈತರಿಗೆ ಅನುಕೂಲವಾಗುವಂಥ ಕೋಲ್ಡ್ ಸ್ಟೋರೇಜ್ ಉದ್ಘಾಟನೆ ಶೀಘ್ರವೇ ನೆರವೇರಬೇಕು
ಸಹಕಾರ ಸಂಘಗಳು ರೈತರ ಜೀವನಾಡಿಗಳಾಗಿವೆ. ಕಡಿಮೆ ಬಡ್ಡಿ ದರದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಆ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.
ಶಾಸಕನಾಗಿದ್ದಾಗ ಗ್ರಾಮದ ಇತಿಹಾಸ ಪ್ರಸಿದ್ಧ ಉಡುಗಿರಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯ ಬಳಿ ಸುಸಜ್ಜಿತ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಲು ₹5 ಕೋಟಿ ಮಂಜೂರು ಮಾಡಿಸಿ, ಗುದ್ದಲಿ ಪೂಜೆ ನೆರವೇರಿಸಿದ್ದೆ. ಆದರೆ, ಈ ಕೆಲಸ ಇನ್ನು ಪ್ರಾರಂಭಿಸಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಿಸಿದರೆ ಇನ್ನೊಮ್ಮೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಕೆಲಸ ಪ್ರಾರಂಭಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಈಗಿರುವ ಶಾಸಕರು ಇನ್ನೊಂದು ವರ್ಷದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಿ, ಅವರೇ ಉದ್ಘಾಟನೆಗೊಳಿಸಲಿ. ಆದರೆ ಪುನಃ ಗುದ್ದಲಿಪೂಜೆ ಮಾಡುವುದು ಸರಿಯಲ್ಲ ಎಂದರು.
ಈ ಭಾಗದಲ್ಲಿ ಹೆಚ್ಚಿನ ರೈತರು ತರಕಾರಿಗಳನ್ನು ಬೆಳೆಯುತ್ತಾರೆ. ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಕೋಲ್ಡ್ ಸ್ಟೋರೇಜ್ ಸೌಲಭ್ಯಕ್ಕಾಗಿ ಸರ್ಕಾರದಿಂದ ಅನುದಾನ ತಂದು ಕಾಮಗಾರಿ ನಡೆಸಲಾಗಿದ್ದು, ಮುಕ್ತಾಯದ ಹಂತದಲ್ಲಿದೆ. ಆದಷ್ಟು ಶೀಘ್ರದಲ್ಲಿಯೇ ಕೋಲ್ಡ್ ಸ್ಟೋರೇಜ್ ಉದ್ಘಾಟಿಸಬೇಕು ಎಂದರು.
- - - -10ಕೆಸಿಎನ್ಜಿ1: