ಗದಗ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಗರೀಬಿ ಹಟಾವೊ ಮೂಲಕ ಬಡತನ ನಿರ್ಮೂಲನೆ ಯೋಜನೆ ಘೋಷಣೆ ಮಾಡಿದರು. ಅದನ್ನೇ ರಾಜೀವ ಗಾಂಧಿ ಹೇಳುತ್ತಾ ಬಂದರು. ಈಗ ರಾಹುಲ್ ಗಾಂಧಿ ಸಹ ಅದನ್ನೇ ಹೇಳುತ್ತಿದ್ದು, ಮೂರು ತಲೆಮಾರಿನಿಂದ ಬಡವರ ಏಳ್ಗೆ ಆಗಲಿಲ್ಲ ಅವರ ಕುಟುಂಬ ಮಾತ್ರ ಶ್ರೀಮಂತವಾಗುತ್ತಾ ಬಂದಿದೆ ಎಂದು ಬಿಜೆಪಿ ಯುವ ನಾಯಕಿ, ಖ್ಯಾತ ಚಿತ್ರ ನಟಿ ಶೃತಿ ಹೇಳಿದರು.
ಕಳೆದ ೧೦ವರ್ಷಗಳ ಕಾಲ ಆಡಳಿತ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ೨೫ ಕೋಟಿ ಬಡ ಕುಟುಂಬಗಳ ಆಶಾಕಿರಣವಾಗಿದ್ದು, ಪ್ರಪಂಚದಲ್ಲಿಯೇ ಶುದ್ಧ ಹಸ್ತ ಪ್ರಧಾನಿಯಾಗಿದ್ದಾರೆ ಎಂದರು.
ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯ ನೀಡುವ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದೆ. ಆದರೆ ಮೋದಿ ಸರ್ಕಾರ ವ್ಯಕ್ತಿತ್ವ ರೂಪಿಸುವ ಲಕ್ಪತಿ ದೀದೀ ಯೋಜನೆ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದರು.ಮಾರುತಿ ನಗರದಿಂದ ಗ್ರಾಮದ ಪ್ರಮುಖ ಬೀದಿಯಲ್ಲಿ ಶಾಸಕ ಸಿ.ಸಿ. ಪಾಟೀಲ ಅವರೊಂದಿಗೆ ಚಿತ್ರ ನಟಿ ಶೃತಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.