ಕನ್ನಡಪ್ರಭ ವಾರ್ತೆ ಕೋಲಾರಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಮತ್ತು ಮಹಿಳೆಯರ ಜೀವನಾಡಿಯಾಗಿದೆ, ಆದರೆ ಕೆಲ ರಾಜಕೀಯ ಪಟ್ಟಭದ್ರ ಹಿತಾಸಕ್ತರು ತಮ್ಮ ಸ್ವಾರ್ಥಕ್ಕಾಗಿ ಬಡವರ ಜೀವನದ ಜತೆ ಚೆಲ್ಲಾಟ ವಾಡುತ್ತಿದ್ದಾರೆ, ಅಧಿಕಾರಿಗಳು ಚುನಾವಣೆ ನಡೆಸಿ, ಆಡಳಿತ ಮಂಡಳಿ ರಚನೆ ಮಾಡಬೇಕು ಎಂದು ಶೇಷಾಪುರ ಗೋಪಾಲ್ ಒತ್ತಾಯಿಸಿದರು.ನಗರದ ಹಾಲಿಸ್ಟರ್ ಭವನದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ನ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ೬೨ನೇ ಮಹಾ ಸಭೆಯಲ್ಲಿ ಮಾತನಾಡಿದರು.ಸಂಘಗಳಿಗೆ ಸಾಲ ನೀಡುತ್ತಿಲ್ಲ ಏಕೆ?
ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯ ಅಧಿಕಾರದ ಅವಧಿ ಮುಗಿದ ನಂತರ ಸರ್ಕಾರವು ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ, ಆದರೆ ರೈತರಿಗೆ, ಮಹಿಳಾ ಸಂಘಗಳ ಸದಸ್ಯರಿಗೆ ಸಾಲ ಸೌಲಭ್ಯ ದೊರೆಯುತ್ತಿಲ್ಲ. ಸಾಲ ವಿತರಣೆ ಮಾಡಬೇಕು ಎಂದು ಸಭೆ ಒತ್ತಾಯಿಸಿತು.
ಸಭೆಯಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕಿ ಶೀಲಾ, ಎಜಿಎಂಗಳಾದ ಶಿವಕುಮಾರ್, ನಾಗೇಶ್, ದೊಡ್ಡಮುನಿ ಹುಸೇನ್ಸಾಬ್, ಪದ್ಮಮ್ಮ, ನಾಗೇಶ್, ಸದಸ್ಯರು ಇದ್ದರು.