ಅಂಗನವಾಡಿ ನಿವೃತ್ತ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

KannadaprabhaNewsNetwork |  
Published : Jul 05, 2024, 12:53 AM IST
30ಎಚ್‌ಪಿಟಿ1- ಹೊಸಪೇಟೆಯಲ್ಲಿಅಂಗನವಾಡಿ ನಿವೃತ್ತ ನೌಕರರ ಸಮಾವೇಶದಲ್ಲಿ ಪಾಲ್ಗೊಂಡಿದ್ದಕಾರ್ಯಕರ್ತೆಯರು.  | Kannada Prabha

ಸಾರಾಂಶ

ಈ ಹಿಂದೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಉಪಧನ ಪರಿಹಾರ ಪಾವತಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

ಹೊಸಪೇಟೆ: ಕಮಲಾಪುರದಲ್ಲಿ ನಡೆದ ಅಂಗನವಾಡಿ ನಿವೃತ್ತ ನೌಕರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ರಾಜ್ಯ ಸರ್ಕಾರ ಸುಪ್ರೀಂ ಕೋಟ್ ಆದೇಶ ಜಾರಿಗೊಳಿಸಿ, ನಿವೃತ್ತ ಅಂಗನವಾಡಿ ನೌಕರರಿಗೆ ಉಪಧನ ಪರಿಹಾರ ನೀಡಬೇಕು ಎಂದು ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಈ ಹಿಂದೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಉಪಧನ ಪರಿಹಾರ ಪಾವತಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸುಪ್ರೀಂ ಕೋರ್ಟ್‌ ಜಾರಿ ಮಾಡಬೇಕು ಎಂದು ಸಭೆಯಲ್ಲಿ ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು.

ಕನಿಷ್ಠ ಉಪಧನ ಪರಿಹಾರ ಒಂದು ಲಕ್ಷ ರು. ಮಾಡಬೇಕು. ಈಗಾಗಲೇ ಆದೇಶವಾಗಿರುವಂತೆ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ನಿವೃತ್ತ ನೌಕರರ ಮುಖ್ಯಬೇಡಿಕೆಗಳನ್ನು ಒತ್ತಾಯಿಸಿ ಹೊಸಪೇಟೆ, ಬಳ್ಳಾರಿ ಭೇಟಿ ಮಾಡಲಿರುವ ಸಚಿವರಿಗೆ ಮನವಿ ಸಲ್ಲಿಸಲು ನಿರ್ಧಾರ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡಂತೆ ಜಂಟಿ ಹೋರಾಟ ಸಮಿತಿ ರಚಿಸಿ ಮುಂದಿನ ಹೋರಾಟ ಮಾಡಲಾಗುವುದು.

ಸಭೆಯಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಯ ಕಾರ್ಯಕರ್ತೆಯರು ಭಾಗವಹಿಸಿದ್ದರು. ಸಭೆಯಲ್ಲಿ ಸಂಗಯ್ಯ ಹಿರೇಮಠ, ಮುಮ್ತಾಜ್‌ ಬೇಗಂ, ಈ.ಮಂಗಮ್ಮ, ನಾಗರತ್ನ, ಕವಿತಾ, ಧರ್ಮದೇವತೆ, ಜ್ಯೋತಿ ಮಾಳಗಿ, ಜಿ.ವೀರಣ್ಣ, ಅಬ್ದುಲ್, ಮೀನಾಕುಮಾರಿ, ತಿಪ್ಪಕ್ಕ ಮತ್ತಿತರರು ಮಾತನಾಡಿದರು.

ಮುಖ್ಯ ಸಂಚಾಲಕ ಎ.ಆರ್.ಎಂ. ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು. ಪುರಾತತ್ವ ಇಲಾಖೆ ಕಾರ್ಮಿಕ ಸಂಘದ ಕಾರ್ಯಕರ್ತರು ಸಭೆ ನಡೆಸಿಕೊಡಲು ಅಗತ್ಯ ಸಹಾಯ ಒದಗಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!