ಭೈರಪ್ಪಗೆ ಮರಣೋತ್ತರ ಭಾರತರತ್ನ ನೀಡಲು ಒತ್ತಾಯ

KannadaprabhaNewsNetwork |  
Published : Sep 29, 2025, 01:03 AM IST
28ಎಚ್ಎಸ್ಎನ್10 :  | Kannada Prabha

ಸಾರಾಂಶ

ಹಿರೀಸಾವೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು. ಸರಸ್ವತಿ ಸಮ್ಮಾನ್ ಶ್ರೀ ಎಸ್.ಎಲ್. ಭೈರಪ್ಪ ಅವರು ಬರೆದಿರುವ ಕಾದಂಬರಿಗಳು ಕೇವಲ ಕಾಲ್ಪನಿಕವಲ್ಲ. ಸಮಾಜ ಹಾಗೂ ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿದ್ದು ಯುವ ಸಮುದಾಯಕ್ಕೆ ದಾರಿದೀಪವಾಗಲಿವೆ. ಅವರ ಕಾದಂಬರಿಗಳು ಮಾರ್ಗಸೂಚಿಯಾಗಿವೆ ಎಂದು ತಿಳಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯುವುದು ಸುಲಭವಲ್ಲ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ವಿಶ್ವ ಶ್ರೇಷ್ಠ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಹಿರೀಸಾವೆ ಹೋಬಳಿ ಅಧ್ಯಕ್ಷ ಎಚ್.ಎ.ಪ್ರಮೋದ್ ಒತ್ತಾಯಿಸಿದರು.

ತಾಲೂಕಿನ ಹಿರೀಸಾವೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು. ಸರಸ್ವತಿ ಸಮ್ಮಾನ್ ಶ್ರೀ ಎಸ್.ಎಲ್. ಭೈರಪ್ಪ ಅವರು ಬರೆದಿರುವ ಕಾದಂಬರಿಗಳು ಕೇವಲ ಕಾಲ್ಪನಿಕವಲ್ಲ. ಸಮಾಜ ಹಾಗೂ ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿದ್ದು ಯುವ ಸಮುದಾಯಕ್ಕೆ ದಾರಿದೀಪವಾಗಲಿವೆ. ಅವರ ಕಾದಂಬರಿಗಳು ಮಾರ್ಗಸೂಚಿಯಾಗಿವೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಡಾ.ಚಂದ್ರೇಗೌಡ ನಿಂಬೇಹಳ್ಳಿ ಮಾತನಾಡಿ, ಎಸ್. ಎಲ್.ಭೈರಪ್ಪ ಅವರು ದೈಹಿಕವಾಗಿ ಅಷ್ಟೇ ನಮ್ಮಿಂದ ಮರೆಯಾಗಬಹುದು. ಆದರೆ ಅವರ ಕೃತಿ, ಕಾದಂಬರಿಗಳು ಜನ-ಮನದಲ್ಲಿ ಸಾವಿರಾರು ವರ್ಷಗಳ ಕಾಲ ಚಿರವಾಗಿ ಉಳಿದು ಇತಿಹಾಸ ಪುಟಗಳಲ್ಲಿ ಸೇರಲಿರುವುದು ವಿಶೇಷ. ಚನ್ನರಾಯಪಟ್ಟಣ ತಾಲೂಕಿನ ಸಂತೇ ಶಿವರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ವಿಶ್ವ ಮಟ್ಟದಲ್ಲಿ ಬೆಳೆದು ಹೆಸರು ಹಾಗೂ ಕೀರ್ತಿ ಪಡೆದ ಅವರು ದೈವ ಸಾಹಿತಿಯಾಗಿದ್ದಾರೆ. ಅವರು ಬರೆದ ಕೆಲ ಕಾದಂಬರಿಗಳು ಸಿನಿಮಾ ರೂಪ ಪಡೆದರೆ ಬಹುತೇಕ ಕಾದಂಬರಿಗಳು ಹಲವು ಭಾಷೆಗಳಲ್ಲಿ ಅನುವಾದಗೊಂಡಿವೆ. ಸಾಹಿತ್ಯ ಕ್ಷೇತ್ರದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯುವುದು ಸುಲಭವಲ್ಲ ಎಂದರು.ಮಾರುತಿ, ಎಸ್.ಎಲ್.ಭೈರಪ್ಪ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಪುಷ್ಪಾರ್ಪಣೆಗೊಳಿಸಿ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಕಾರ್ಯದರ್ಶಿಗಳಾದ ಮಂಜು, ಹರೀಶ್, ಖಜಾಂಚಿ ತೋಟಿ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ಡಾ.ಎಚ್.ಬಿ.ಶಂಕರ್, ನಿವೃತ್ತ ಪ್ರಾಂಶುಪಾಲ ತಮ್ಮಣ್ಣಗೌಡ, ಕಸಾಪ ಸದಸ್ಯರಾದ ವೆಂಕಟೇಶ್, ಮುರಳೀಧರ್, ಜೀವಿ ಗೋವಿಂದ್, ಮಂಜುನಾಥ್, ಬೋರೇಗೌಡ, ಮಾದಲಗೆರೆ ನಂಜೇಗೌಡ, ಪುಟ್ಟರಾಜು, ಭಾರತಿ ಪುರುಷೋತ್ತಮ್ ಇತರರು ಇದ್ದರು.

==

ಫೋಟೋ: ಹಿರೀಸಾವೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ