ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಹಿರಿಯ ನಾಗರಿಕರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಉಚಿತಗೊಳಿಸುವ ಜೊತೆಗೆ ಸರ್ಕಾರ ಕಡ್ಡಾಯವಾಗಿ ಹೆಲ್ತ್ ಇನ್ಶೂರನ್ಸ್ ಮಾಡಿಸಬೇಕು. ಹಿರಿಯ ನಾಗರಿಕರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಸಚಿವಾಲಯ ಆರಂಭಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರದ 15 ಕೋಟಿಗಿಂತ ಹೆಚ್ಚಿನ ಹಿರಿಯ ನಾಗರಿಕರು ಸಂಘಟಿತರಾಗುತ್ತಿದ್ದಾರೆ ಎಂದು ತಿಳಿಸಿದರು.
ಟ್ರಸ್ಟ್ ಸದಸ್ಯರಾದ ಬಸವರಾಜ ಇಂಡಿ, ಮಹಾಬಳೇಶ್ವರ ಗುಡಗುಂಟಿ, ಆರ್.ಕೆ. ಮಠದ, ವಿಜಯಶ್ರೀ ಮುರನಾಳ ಹಾಗೂ ಜಿ.ಎನ್. ಪಾಟೀಲ ಇತರರಿದ್ದರು.