ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

KannadaprabhaNewsNetwork |  
Published : Nov 23, 2024, 12:32 AM IST
ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ವಕೀಲರ ಮೇಲಿನ ಹಲ್ಲೆ ಖಂಡಿಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಸಾಗರ

ಹೊಸೂರಿನಲ್ಲಿ ನಡೆದ ಕಣ್ಣನ್ ಎಂಬ ವಕೀಲರ ಮೇಲಿನ ಹಲ್ಲೆ ಖಂಡಿಸಿ, ತಕ್ಷಣ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಗುರುವಾರ ವಕೀಲರ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನ ಗಡಿಭಾಗವಾದ ಹೊಸೂರಿನಲ್ಲಿ ನ.20ರಂದು ಕಣ್ಣನ್ ಎಂಬ ವಕೀಲರನ್ನು ರಸ್ತೆಯ ಮೇಲೆ ಮಚ್ಚಿನಿಂದ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಇಂತಹ ಕೃತ್ಯದಿಂದ ವಕೀಲರು ನಿರ್ಭಯವಾಗಿ ತಮ್ಮ ಕೆಲಸವನ್ನು ಮಾಡಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಿಲಾಗಿದೆ.

ಪದೇಪದೇ ವಕೀಲರ ಮೇಲೆ ಇಂತಹ ಹಲ್ಲೆಯಂತಹ ಪ್ರಕರಣ ಹೆಚ್ಚುತ್ತಿದೆ. ವಕೀಲರಿಗೆ ಸೂಕ್ತ ರಕ್ಷಣೆ ನೀಡಲು ಕಾಲಕಾಲಕ್ಕೆ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದರೂ ಈತನಕ ಸರ್ಕಾರ ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಖಂಡನೀಯ. ಕರ್ನಾಟಕದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆ ಇನ್ನಷ್ಟು ಬಿಗಿಗೊಳಿಸಬೇಕು. ಕಣ್ಣನ್ ಅವರ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸಂಘದ ಪ್ರಮುಖರಾದ ಶ್ರೀಧರ್ ಎಚ್.ಆರ್, ರಮೇಶ್ ಎಚ್.ಬಿ, ವಿನಯಕುಮಾರ್, ಬಾಲಕೃಷ್ಣ, ಸುದರ್ಶನ, ವಿ.ಶಂಕರ್, ಪ್ರೇಮ್ ಸಿಂಗ್, ರವೀಶ್, ಕೆ.ವಿ.ಪ್ರವೀಣ್, ಸರೋಜ ರಾಘವೇಂದ್ರ, ಫೈಜುಲ್ಲಾ, ಅಣ್ಣಪ್ಪ ಎಚ್.ಕೆ. ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!