ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಜಾರಿಗೊಳಿಸಲು ಒತ್ತಾಯ

KannadaprabhaNewsNetwork |  
Published : Sep 25, 2024, 12:56 AM IST
24ಎಚ್‌ಪಿಟಿ3 - ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ರಂಗನಾಥ ಹವಾಲ್ದಾರ್ ಮಾತನಾಡಿದರು. ಒಕ್ಕೂಟದ ಮುಖಂಡರು ಇದ್ದರು. | Kannada Prabha

ಸಾರಾಂಶ

ನಿಶ್ಚಿತ ಹಳೆಯ ಪಿಂಚಣಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದಿಂದ ಸೆ. 26ರಂದು ರಾಷ್ಟ್ರೀಯ ಪ್ರತಿಭಟನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಹೊಸಪೇಟೆ: ಪಿಎಫ್, ಆರ್‌ಡಿಎ ಕಾಯ್ದೆ, ಎನ್‌ಪಿಎಸ್, ಯುಪಿಎಸ್ ಪದ್ಧತಿ ರದ್ದುಗೊಳಿಸಿ, ನಿಶ್ಚಿತ ಹಳೆಯ ಪಿಂಚಣಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದಿಂದ ಸೆ. 26ರಂದು ರಾಷ್ಟ್ರೀಯ ಪ್ರತಿಭಟನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯ ಉಪಾಧ್ಯಕ್ಷ ರಂಗನಾಥ ಹವಾಲ್ದಾರ್ ತಿಳಿಸಿದ್ದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಹಳೇ ಪಿಂಚಣಿ ವ್ಯವಸ್ಥೆಯಿಂದ ಸರ್ಕಾರಿ ನೌಕರರ ನಿವೃತ್ತಿ ಜೀವನ ಸಂಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಮರು ಸ್ಥಾಪಿಸುವುದು, ಕಟಾವಣೆಯಾಗಿರುವ ನೌಕರರ ವಂತಿಗೆಯನ್ನು ರಾಜ್ಯ ಸರ್ಕಾರಗಳಿಗೆ ಹಿಂದಿರುಗಿಸಲು ಕೇಂದ್ರ ಸರ್ಕಾರ ನಿರ್ದೇಶಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು. ಇನ್ಮುಂದೆ ಗುತ್ತಿಗೆ, ಹೊರಗುತ್ತಿಗೆ ನೇಮಕಾತಿ ಕೈಬಿಡಬೇಕು. ಎಲ್ಲ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಆಡಳಿತ ಸುಧಾರಣೆ ಆಯೋಗ-2ರ ನೌಕರ ವಿರೋಧಿ ಶಿಫಾರಸುಗಳನ್ನು ಹಿಂಪಡೆಯುವುದು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು. ಐದು ವರ್ಷಗಳಿಗೊಮ್ಮೆ ನಿಯಮಿತವಾಗಿ ವೇತನ ಪರಿಷ್ಕರಣೆ ಮಾಡುವುದು, ತಡೆ ಹಿಡಿದಿರುವ 19 ತಿಂಗಳ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ ಊಟದ ವಿರಾಮದ ವೇಳೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದು, ಎಲ್ಲ ಸರ್ಕಾರಿ ನೌಕರರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಒಕ್ಕೂಟದ ಮುಖಂಡರಾದ ಮರಡಿ ಜಂಬಯ್ಯ ನಾಯಕ, ನಾಗರಾಜ ಪತ್ತಾರ, ಬಿಸಾಟಿ ತಾಯಪ್ಪ ನಾಯಕ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!