ಕನ್ನಡಪ್ರಭ ವಾರ್ತೆ ಶ್ರೀಮಂಗಲ
ರಸ್ತೆಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ಗಾಯಗೊಂಡು ಬಿದ್ದಿದ್ದ ಶಾರದಾ ಅವರನ್ನು ಕಂಡು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.ಜಿಲ್ಲಾಸ್ಪತ್ರೆಗೆ ಸಂಕೇತ್ ಪೂವಯ್ಯ ಭೇಟಿ: ವಿಷಯ ತಿಳಿದು ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದರು. ಸ್ಕ್ಯಾನಿಂಗ್ ವರದಿ ಬಂದ ನಂತರ ವೈದ್ಯರ ಸಲಹೆಯಂತೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುವ ಅಥವಾ ಹೆಚ್ಚಿನ ಚಿಕಿತ್ಸೆ ಅಗತ್ಯವಾದರೆ ಬೇರೆ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಹೆಚ್ಚಿನ ಚಿಕಿತ್ಸೆ ಅಗತ್ಯವಾದರೆ ಅರಣ್ಯ ಇಲಾಖೆ ವತಿಯಿಂದ ಮೈಸೂರು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೆಚ್ಚ ಭರಿಸಲಾಗುವುದು ನೀಡಲಾಗುವುದು ಎಂದು ಅವರು ತಿಳಿಸಿದರು. ಪರಕಟಗೇರಿಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಲು ಶನಿವಾರ ಕಾರ್ಯಾಚರಣೆ ನಡೆಸಲು ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಅರವಿಂದ್ ಅವರಿಗೆ ಸೂಚನೆ ನೀಡಿರುವುದಾಗಿ ಸಂಕೇತ್ ಪೂವಯ್ಯ ತಿಳಿಸಿದರು.