ಚನ್ನಪಟ್ಟಣ: ಜಿಲ್ಲೆಯ ರೈತರ ಪಾಲಿಗೆ ಕಂಟಕಪ್ರಾಯವಾಗಿದ್ದ ಟಸ್ಕರ್ ಆನೆಯನ್ನು ಅನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದ್ದು, ಪುಂಡಾನೆ ಸೆರೆ ಕಾರ್ಯಾಚರಣೆಗೆ ಮೊದಲ ದಿನವೇ ಯಶಸ್ಸು ಸಿಕ್ಕಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು ೨ ಗಂಟೆಗೆ ತಾಲೂಕಿನ ಚಿಕ್ಕಮಣ್ಣುಗುಡ್ಡೆ ವ್ಯಾಪ್ತಿಯ ತಿಮ್ಮೇಗೌಡನದೊಡ್ಡಿ ಬಳಿ ಬೀಡುಬಿಟ್ಟಿದ್ದ ಆನೆಯನ್ನು ಅರವಳಿಕೆ ಮದ್ದು ಶೂಟ್ ಮಾಡಿ ಪ್ರಜ್ಞೆ ತಪ್ಪಿಸಿ ಸೆರೆ ಹಿಡಿದಿದ್ದಾರೆ. ರೆಡಿಯೋ ಕಾಲರ್ ಹಾಗೂ ವಾಚರ್ಗಳ ಸಹಾಯದಿಂದ ಪುಂಡಾನೆ ಚಲನವಲನದ ಮೇಲೆ ಗುರುವಾರದಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ನಿಗಾ ಇರಿಸಿದ್ದರು. ಪುಂಡಾನೆ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ಮತ್ತು ವೈದ್ಯರು ಆನೆ ಇರುವ ಸ್ಥಳವನ್ನು ದೂರದಿಂದಲೇ ವೀಕ್ಷಿಸಿದ್ದರು.
ಅರವಳಿಕೆ ಶೂಟ್:ಪುಂಡಾನೆ ಬೀಡುಬಿಟ್ಟಿರುವ ಸ್ಥಳ ತಲುಪಿದ ಅರಣ್ಯ ಇಲಾಖೆ ತಂಡ, ಆನೆ ಸಮೀಪಿಸಿದ ತಕ್ಷಣ ಕಾರ್ಯಾಪ್ರವೃತ್ತರಾಗಿ, ಈ ವೇಳೆ ಧನಂಜಯ ಆನೆ ಮೇಲೆ ಕುಳಿತ ವೈದ್ಯ ರಮೇಶ್ ಒಂದು ರೇಂಜ್ಗೆ ಆನೆ ಸಿಕ್ಕ ತಕ್ಷಣ ಸಿದ್ದಪಡಿಸಿದ್ದ ಅರವಳಿಕೆ ಇಂಜೆಕ್ಷನ್ ತುಂಬಿದ ಗನ್ನಿಂದ ಪುಂಡಾನೆಗೆ ಶೂಟ್ ಮಾಡಿದ್ದಾರೆ. ಅರವಳಿಕೆ ಇಂಜೆಕ್ಷನ್ನಿಂದ ಆನೆ ಪ್ರಜ್ಞೆ ತಪ್ಪಿರುವುದನ್ನು ಖಚಿತ ಪಡಿಸಿಕೊಂಡ ತಂಡ ಆನೆಯನ್ನು ಸಮೀಪಿಸಿದೆ.
ಈ ವೇಳೆ ಪಳಗಿದ ಆನೆಗಳು ಪುಂಡಾನೆಯನ್ನು ಸೊಂಡಲಿನಿಂದ ಸವರುತ್ತಾ, ದಂತದಿಂದ ತಿವಿಯುತ್ತಾ ಮುನ್ನಡೆಸಿಕೊಂಡು ಬಂದು, ಅಲ್ಲಿ ಕ್ರೇನ್ ಸಹಾಯದಿಂದ ಆನೆಯನ್ನು ಈ ಮೊದಲೇ ಆನೆ ಸ್ಥಳಾಂತರಕ್ಕೆ ಅನುಕೂಲಕರವಾಗುವಂತೆ ನಿರ್ಮಿಸಿದ್ದ ಲಾರಿಗೆ ಹತ್ತಿಸಲಾಗಿದೆ. ಅಲ್ಲಿಂದ ಆನೆ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸರ್ಕಾರ ನಿಗದಿಪಡಿಸಿದ ಜಾಗಕ್ಕೆ ಆನೆಸ್ಥಳಾಂತರಗೊಳಿಸಲಾಗುವುದು.
ರೆಡಿಯೋ ಕಾಲರ್:
ಶುಕ್ರವಾರ ಬೆಳಗ್ಗೆಯಷ್ಟೇ ಪುಂಡಾನೆಗಳ ಸೆರೆ ಕಾರ್ಯಾಚರಣೆಗೆ ಶಾಸಕ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದ್ದರು. ಮಧ್ಯಾಹ್ನದ ವೇಳೆಗೆ ಆನೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದೆ.
ಸಿಪಿವೈ ಭೇಟಿ:
ಕೋಟ್.................
-ರಾಮಕೃಷ್ಣಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ, ರಾಮನಗರ
ಕೋಟ್...............ಆನೆ ಸೆರೆ ಕಾರ್ಯಾಚರಣೆಗೆ ಮೊದಲ ದಿನವೇ ಯಶಸ್ಸು ಸಿಕ್ಕಿರುವುದು ಸಂತಸ ಮೂಡಿಸಿದೆ. ಎರಡು ಆನೆ ಹಿಡಿಯಲು ಅನುಮತಿ ದೊರೆತಿದ್ದು, ಇದೀಗ ಒಂದು ಆನೆಯನ್ನು ಸೆರೆಹಿಡಿಯಲಾಗಿದೆ. ಇನ್ನೊಂದು ಆನೆ ಸೆರೆ ಸಿಕ್ಕಲ್ಲಿ ಆನೆಗಳ ಉಪಟಳ ಸ್ವಲ್ಪ ಮಟ್ಟಿಗೆ ತಡೆಯಬಹುದು.
-ಯೋಗೇಶ್ವರ್, ಶಾಸಕರು, ಚನ್ನಪಟ್ಟಣಪೋಟೊ ೨೦ಸಿಪಿಟಿ೭ :
ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಟಸ್ಕರ್ ಆನೆ ಪಳಗಿದ ಆನೆಗಳ ಸಹಾಯದಿಂದ ಕರೆತರಲಾಯಿತು.ಪೋಟೊ ೨೦ಸಿಪಿಟಿ೮ :
ಸೆರೆಸಿಕ್ಕ ಟಸ್ಕರ್ ಆನೆ ಕ್ರೇನ್ ಸಹಾಯದಿಂದ ಲಾರಿಗೆ ಹತ್ತಿಸಲಾಯಿತು.