ಚಾರ್ಮಾಡಿ ಘಾಟ್‌ ಬಿದಿರುತಳ ಗುಡ್ಡದಲ್ಲಿ ಅರಣ್ಯಕ್ಕೆ ಬೆಂಕಿ: ಕಿಡಿಗೇಡಿಗಳ ಕೃತ್ಯ

KannadaprabhaNewsNetwork |  
Published : Jan 20, 2026, 01:15 AM IST
ಚಾರ್ಮಾಡಿ ಘಾಟಿಯ ಬಿದಿರುತಳ ಗುಡ್ಡದಲ್ಲಿ ಅರಣ್ಯಕ್ಕೆ ಬಿದ್ದಿರುವ ಬೆಂಕಿಯನ್ನು  ಅರಣ್ಯ ಇಲಾಖೆಯವರು ನಂದಿಸುತ್ತಿರುವುದು. | Kannada Prabha

ಸಾರಾಂಶ

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವಿಭಾಗದ ಬಿದಿರುತಳ ಗುಡ್ಡದಲ್ಲಿ ಭಾನುವಾರ ರಾತ್ರಿ ಅರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗುಡ್ಡದ ಮೇಲಿನ ಅರಣ್ಯ ಪ್ರದೇಶದಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಯ ಜ್ವಾಲೆಗಳು ದೂರದಿಂದಲೇ ಕಾಣಿಸಿಕೊಂಡವು.

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವಿಭಾಗದ ಬಿದಿರುತಳ ಗುಡ್ಡದಲ್ಲಿ ಭಾನುವಾರ ರಾತ್ರಿ ಅರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗುಡ್ಡದ ಮೇಲಿನ ಅರಣ್ಯ ಪ್ರದೇಶದಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಯ ಜ್ವಾಲೆಗಳು ದೂರದಿಂದಲೇ ಕಾಣಿಸಿಕೊಂಡವು.ಅರಣ್ಯ ಪ್ರದೇಶದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಹುಲ್ಲು ಗಾವಲು ಸೇರಿದಂತೆ ಅರಣ್ಯ ಸಂಪತ್ತು ಸುಟ್ಟು ಕರಕ ಲಾಗಿದೆ. ಈ ಅಗ್ನಿ ಅವಘಡದಲ್ಲಿ ಕಿಡಿಗೇಡಿಗಳ ಕೃತ್ಯ ವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.ಘಟನೆ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿಗಳಾದ ರಂಜಿತ್ ಹಾಗೂ ಬಸವರಾಜ್, ಗಸ್ತು ಅರಣ್ಯ ಪಾಲಕ ಉಮೇಶ್, ಅರಣ್ಯ ಸಿಬ್ಬಂದಿಗಳಾದ ದಿನೇಶ್, ಅರುಣ್ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದರು.ಅಗ್ನಿ ನಂದಿಸದಿದ್ದರೆ ಬೆಂಕಿ ಇನ್ನಷ್ಟು ವ್ಯಾಪಿಸಿ ಅರಣ್ಯಕ್ಕೆ ಭಾರೀ ಹಾನಿ ಆಗುವ ಸಾಧ್ಯತೆ ಗಳಿದ್ದವು. 19 ಕೆಸಿಕೆಎಂ 4ಚಾರ್ಮಾಡಿ ಘಾಟಿಯ ಬಿದಿರುತಳ ಗುಡ್ಡದಲ್ಲಿ ಅರಣ್ಯಕ್ಕೆ ಬಿದ್ದಿರುವ ಬೆಂಕಿಯನ್ನು ಅರಣ್ಯ ಇಲಾಖೆಯವರು ನಂದಿಸುತ್ತಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ