ಹನೂರು: ತಾಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಘಟನೆ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಲಯದ ವ್ಯಾಪ್ತಿಯ ಪಾಲಾರ್ ವಲಯದ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಜಪ್ಪ ಪಾಲಾರ್ ಗ್ರಾಮದಲ್ಲಿ ಆದಿವಾಸಿ ಕುಟುಂಬಗಳಿಗೆ 18 ಮನೆ ಮಂಜೂರಾಗಿದ್ದು ಎಲ್ಲಾ ಮನೆಯವರು ಆದಿಪಾಯ ಕಾಮಗಾರಿ ಪೂರ್ಣಗೊಂಡ ನಂತರ ಸರ್ಕಾರದಿಂದ ಮೊದಲ ಕಂತು ಬಿಡುಗಡೆಯಾಗಿದೆ. ಈ ವೇಳೆ ಮನೆ ನಿರ್ಮಾಣ ಮಾಡುತ್ತಿರುವ ಆದಿವಾಸಿಗಳನ್ನು ನೀವು ಗೋಡೆ ಕಟ್ಟಬೇಡಿ ಎಂದು ಸುಮಾರು ಒಂದು ತಿಂಗಳುಗಳ ಕಾಲ ಕಾಮಗಾರಿಗೆ ಅವಕಾಶ ಮಾಡಿಕೊಟ್ಟಿಲ್ಲ. ನಂತರ ನಿವಾಸಿಗಳೆಲ್ಲರೂ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಾಗ ಪ್ರತಿ ಮನೆಯವರು ಒಂದೊಂದು ಸಾವಿರದಂತೆ ₹18 ಸಾವಿರ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಪಾಲಾರ್ ಗ್ರಾಮದ ಫಲಾನುಭವಿ ಮುರುಗೇಶ್ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ದಾಳಿಯಲ್ಲಿ ಪೇದೆ ಗೌತಮ್, ಮಹಾಲಿಂಗ ಸ್ವಾಮಿ, ಮಹಾದೇವ ಸ್ವಾಮಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.