ಪರೀಕ್ಷೆ ಭಯ ಬಿಟ್ಟು, ಸಾಮರ್ಥ್ಯಕ್ಕೆ ತಕ್ಕಂತೆ ಓದಿ

KannadaprabhaNewsNetwork |  
Published : Jan 11, 2025, 12:48 AM IST
ಮುಂಡರಗಿ ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಾಮರ್ಥ್ಯ ಆಧಾರಿತ ತರಬೇತಿಯನ್ನು ಎಸ್.ಸಿ.ಚಕ್ಕಡಿಮಠ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಾಲಕ-ಶಿಕ್ಷಕ-ಪಾಲಕ ಇವರು ಸರಿಯಾಗಿ ಕಾರ್ಯನಿರ್ವಹಿಸಿದರೆ ಫಲಿತಾಂಶ ಸುಧಾರಿಸಲು ಸಾಧ್ಯ

ಮುಂಡರಗಿ: ಪರೀಕ್ಷೆ ಭಯವು ಶಕ್ತಿ ಮತ್ತು ಸಾಮರ್ಥ್ಯ ಕುಗಿಸುತ್ತದೆ.ಆದ್ದರಿಂದ ಮಕ್ಕಳು ಪರೀಕ್ಷೆಯ ಭಯ ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಓದಬೇಕು ಎಂದು ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಆಡಳಿತಾಧಿಕಾರಿ ಪ್ರೊ.ಸಿ.ಎಸ್. ಅರಸನಾಳ ಸಲಹೆ ನೀಡಿದರು.

ಅವರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಯುನಿವರ್‍ಸಲ್ ನಾಲೇಜ್ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಸಂಯುಕ್ತವಾಗಿ ಆಯೋಜಿಸಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾಮರ್ಥ್ಯ ಆಧಾರಿತ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲಕ-ಶಿಕ್ಷಕ-ಪಾಲಕ ಇವರು ಸರಿಯಾಗಿ ಕಾರ್ಯನಿರ್ವಹಿಸಿದರೆ ಫಲಿತಾಂಶ ಸುಧಾರಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಸತತ ಅಧ್ಯಯನ ಮಾಡಿದರೆ ತಮ್ಮ ಸ್ಮರಣ ಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಶ್ರದ್ಧೆ, ಉತ್ಸಾಹ, ಬುದ್ಧಿವಂತಿಕೆಯಿಂದ ಅಭ್ಯಾಸ ಮಾಡಿದರೆ ಆ ಓದಿಗೆ ಸೂಕ್ತ ಪ್ರತಿಫಲ ಸಿಕ್ಕೇ ಸಿಗುತ್ತದೆ ಎಂದರು.

ಶ್ರೀ ಜ.ಅ .ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಸ್.ಸಿ. ಚಕ್ಕಡಿಮಠ ತರಬೇತಿ ಉದ್ಘಾಟಿಸಿ ಮಾತನಾಡಿ, ಮಕ್ಕಳು ಓದಿನ ಜತೆಗೆ ಬರವಣಿಗೆ ಮಾಡಬೇಕು. ಅನ್ಯ ವಿಷಯಗಳು ಮನಸ್ಸನ್ನು ಪ್ರವೇಶಿಸದಂತೆ ಎಚ್ಚರವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿ.ಎಚ್. ಹೊಳೆಯಮ್ಮನವರ, ಎನ್.ಎಂ.ಕುಕನೂರ,ಎಚ್.ಎನ್. ಗೌಡ್ರ, ಮಂಜುನಾಥ ತೆಗ್ಗಿನಮನಿ, ಪರಮೇಶ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ದೇವರಡ್ಡಿ ಇಮ್ರಾಪೂರ ಸ್ವಾಗತಿಸಿದರು. ವಿ.ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗುಡದೀರಪ್ಪ ಲಿಂಗಶೆಟ್ಟರ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ