ಭಿನ್ನತೆಗಳ ಮರೆತು ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ

KannadaprabhaNewsNetwork |  
Published : Feb 22, 2026, 01:30 AM IST
ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಗಾಟಿಸಿ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಗಾಟಿಸಿ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಕ್ಷೇತ್ರದ ನೀರಾವರಿ, ಶಿಕ್ಷಣ, ಕುಡಿಯುವ ನೀರು, ಆರೋಗ್ಯ, ವಿದ್ಯುತ್‌ ಮತ್ತಿತರ ಕ್ಷೇತ್ರಗಳಲ್ಲಿ ಆಗಿರುವ ಗಮನಾರ್ಹ ಅಭಿವೃದ್ಧಿಯನ್ನು ಶಾಸಕ ಡಾ.ಎಂ.ಚಂದ್ರಪ್ಪ ಜನರ ಎದುರು ತೆರೆದಿಟ್ಟರು.

ಎಚ್.ಡಿ.ಪುರ ಗ್ರಾಮದಲ್ಲಿ ಪಿ.ಎಂ.ಶ್ರೀ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಕಲಾ ಸಂಭ್ರಮ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಕ್ಷೇತ್ರದ ಎಲ್ಲಾ ಹಳ್ಳಿಗಳೂ ಅಭಿವೃದ್ಧಿಯ ಪಥದಲ್ಲಿ ಸಾಗಿವೆ. ಎಲ್ಲ ಕಡೆಗೆ ಅಗತ್ಯವಾದ ನಾಗರೀಕ ಸೌಲಭ್ಯಗಳನ್ನು ಒದಗಿಸಲು ಎಲ್ಲ ಭಿನ್ನತೆಗಳನ್ನು ಮರೆತು ಕೆಲಸ ಮಾಡುತ್ತಿದ್ದೇನೆ ಎಂದರು.

ಕ್ಷೇತ್ರದಲ್ಲಿ ಈಗಾಗಲೇ 13 ಪಬ್ಲಿಕ್‌ ಶಾಲೆಗಳು ತಲೆ ಎತ್ತಿವೆ. ಕೆರೆಗಳು ಮತ್ತು ಚೆಕ್‌ ಡ್ಯಾಂಗಳ ನಿರ್ಮಾಣ ಆಗಿದೆ. ರೈತರಿಗೆ ಗುಣಾತ್ಮಕ ಶಿಕ್ಷಣ ಒದಗಿಸಲು ನಾಲ್ಕಾರು ಕಡೆ ವಿದ್ಯುತ್‌ ಕೇಂದ್ರಗಳನ್ನು ಸ್ಥಾಪಿಸಲು ಕಾಮಗಾರಿ ವೇಗದಲ್ಲಿ ನಡೆಯುತ್ತಿದೆ.

ವಾಣಿ ವಿಲಾಸ ಸಾಗರದಿಂದ ಕುಡಿಯುವ ನೀರು ತರುವ ಯೋಜನೆಯೂ ಕ್ಷಿಪ್ರವಾಗಿ ನಡೆದಿದೆ. ಕಿತ್ತೂರು ಚೆನ್ನಮ್ಮ, ಇಂದಿರಾಗಾಂಧಿ, ಮೊರಾರ್ಜಿ ದೇಸಾಯಿ ಶಾಲೆಗಳ ನಿರ್ಮಾಣ ಆಗಿದೆ. ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಇಲ್ಲಿ ಶಿಕ್ಷಣಕ್ಕೆ ಅನುವು ಸಿಕ್ಕಿದೆ ಎಂದರು.

ಆರೋಗ್ಯ ಕ್ಷೇತ್ರದ ಕಡೆಗೂ ಗಮನ ನೀಡಲಾಗಿದೆ. ಹೊಳಲ್ಕೆರೆ ಕೇಂದ್ರದಲ್ಲಿ ಹೈಟೆಕ್‌ ಆಸ್ಪತ್ರೆ ನಿರ್ಮಾಣ ಆಗಿದೆ. ಇದರಿಂದ ಸುತ್ತಲ ಜನರಿಗೆ ಆಗಿರುವ ಅನುಕೂಲವನ್ನು ಜನರೇ ಮೆಚ್ಚಿಕೊಂಡಿದ್ದಾರೆ. ವೈದ್ಯರು, ಸಹಾಯಕರು, ಸಿಬ್ಬಂದಿಗೆ ವಸತಿ ಗೃಹಗಳ ನಿರ್ಮಾಣ ಆಗಿದೆ ಎಂದರು.

ಕೇವಲ 150 ಮಕ್ಕಳು ಶಿಕ್ಷಣ ಪಡೆಯುತ್ತಿದ್ದ ಎಂ.ಎಂ.ಸರ್ಕಾರಿ ಪ್ರೌಢಶಾಲೆಯನ್ನು ಕೆಡವಿ 46 ಕೊಠಡಿಗಳನ್ನು ಕಟ್ಟಿಸಿ 50 ಶಿಕ್ಷಕರುಗಳನ್ನು ನೇಮಕ ಮಾಡಿದ ಪರಿಣಾಮ ಒಂದೆ ಕಡೆ 1650 ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.

ತಾಲೂಕಿನಾದ್ಯಂತ 13 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ. ಇದರಿಂದ ಎಲ್‌ಕೆಜಿಯಿಂದ ಹಿಡಿದು ಪಿಯುಸಿವರೆಗೆ ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೀಟುಗಳನ್ನು ಪಡೆಯಲು ಅನುಕೂಲವಾಗಲಿದೆ. ಇನ್ನೂ ಎರಡು ತಿಂಗಳಲ್ಲಿ ಮತ್ತೆ ಎರಡು ಶಾಲೆಗಳನ್ನು ನೀಡುತ್ತೇನೆ. ಮಕ್ಕಳ ಸಂಖ್ಯೆಗನುಗುಣವಾಗಿ ಎಷ್ಟು ಶಾಲೆಗಳು ಬೇಕಾಗುತ್ತದೆನ್ನುವುದನ್ನು ನಿರ್ಧರಿಸಿ ಮುಂದಿನ ದಿನಗಳಲ್ಲಿ ಶಾಲೆಗಳನ್ನು ಮಂಜೂರು ಮಾಡಿಸುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ್, ಗ್ರಾಪಂ ಅಧ್ಯಕ್ಷ ಕೆ.ಟಿ.ಅಜ್ಜಪ್ಪ, ಉಪಾಧ್ಯಕ್ಷೆ ಹೇಮಾವತಿ, ಎಲೆರಾಜಪ್ಪ, ಸತೀಶ್, ಯತೀಶ್, ರಮೇಶ್, ಪ್ರಕಾಶ್, ಅಣ್ಣಪ್ಪ, ಪ್ರವೀಣ್, ಗಣೇಶ್, ದಿವಾಕರ್, ಸುಮಿತ್ರಮ್ಮ, ಓಬಳಸ್ವಾಮಿ ಹಾಗೂ ಶಿಕ್ಷಕರುಗಳು, ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಂಡವಪುರ: ಬೇಬಿ ಬೆಟ್ಟ ಜಾತ್ರೆಯಲ್ಲಿ ಎತ್ತುಗಳ ಆಕರ್ಷಣೆ
ದೊಡ್ಡಬಳ್ಳಾಪುರ ಸೀರೆ ಸಂತೆ; ವೈವಿಧ್ಯತೆ ಅನಾವರಣ