ಬೇಡಿಕೆ ಈಡೇರಿಕೆಗೆ ಮಾನವ ಸರಪಳಿ ನಿರ್ಮಿಸಿ ಧರಣಿ

KannadaprabhaNewsNetwork |  
Published : Feb 13, 2026, 03:00 AM IST
ಗೋಕಾಕ | Kannada Prabha

ಸಾರಾಂಶ

ಗ್ರಾಮ ಪಂಚಾಯತ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಗ್ರಾಮ ಪಂಚಾಯತ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಹಾಗೂ ತಾಪಂನ ಸಹಾಯಕ ನಿರ್ದೇಶಕರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು. ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಮುಖ್ಯಕಾರ್ಯದರ್ಶಿಗೂ ಮನವಿ ನೀಡಿದರು.

ಬೆಲೆ ಏರಿಕೆ ಆಧಾರದಲ್ಲಿ ಮತ್ತು ಸೇವಾ ಜ್ಯೇಷ್ಠತೆ ಆಧಾರದಲ್ಲಿ ವೇತನ ಹೆಚ್ಚಳ, ನಿವೃತ್ತಿ ಅಥವಾ ನಿಧನರಾದರೆ 10 ಲಕ್ಷ ಇಡಗಂಟು, ಈಗಾಗಗಲೇ ಗ್ರಾಪಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಇಓಗಳಿಗೆ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ ಎಂದು ಅನುಮೊದನೆ, ತರಬೇತಿ ಪಡೆದಿರುವ ಎಲ್ಲ ಸ್ವಚ್ಛ ವಾಹಿನಿ ನೌಕರರಿಗೆ ಉದ್ಯೋಗ ನೀಡಿ 15ನೇ ಹಣಕಾಸು ಯೋಜನೆಯಲ್ಲಿ ವೇತನ ಪಾವತಿ, ಆದಾಯಕ್ಕೆ ಅನುಗುಣವಾಗಿ ಕರವಸೂಲಿ ಹುದ್ದೆಗಳ ನಿಗದಿ, 2017ರೊಳಗೆ ಇರುವ ಹೆಚ್ಚುವರಿ ಕರ ವಸೂಲಿಗಾರರಿಗೆ ಅನುಮೋದನೆ ನೀಡಬೇಕು. ಎಲ್ಲ ಗ್ರಾಮ ಪಂಚಾಯತಗಳಲ್ಲಿ ಲೆಕ್ಕ ಸಹಾಯಕರ ಹುದ್ದೆ ಸೃಷ್ಟಿಸಬೇಕು. ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ನೌಕರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ ಜಿಲ್ಲಾಧ್ಯಕ್ಷೆ ದೊಡ್ಡವ್ವ ಪೂಜಾರಿ, ಗ್ರಾಪಂ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಡ್ಡೆಪ್ಪ ಭಜಂತ್ರಿ, ಬಿಸಿಯೂಟ ನೌಕರರ ಸಂಘದ ಪಾರ್ವತಿ ಕೌಜಲಗಿ, ಮಾಶಾಬಿ ಡಾಲಾಯತ, ಗ್ರಾಪಂ ನೌಕರರ ಸಂಘದ ರಮೇಶ ಹೊಳಿ, ಬಸವರಾಜ ಮಿರ್ಜಿ, ಬಾಲೇಶ ದುಂಡಾನಟ್ಟಿ ಸೇರಿದಂತೆ ನೂರಾರು ಗ್ರಾಪಂ ನೌಕರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಪಾಲಿಗೆ ವೈದ್ಯರು ದೇವರಾಗಿ, ರಾಕ್ಷಸರಾಗಬೇಡಿ: ಡಿಸಿ ಸಂಗಪ್ಪ
ನಾಡಿದ್ದು ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ