ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೇವೆಗಳು ಸ್ಥಗಿತಗೊಂಡಿದ್ದವು. ತುರ್ತು ಸೇವೆಗಳಲ್ಲಿ ಮಾತ್ರ ವೈದ್ಯರು, ಸಿಬ್ಬಂದಿ ತಮ್ಮನ್ನು ತೊಡಗಿಸಿಕೊಂಡರು.ಕುಶಾಲನಗರ ಪಟ್ಟಣದಲ್ಲಿ ಇನ್ನರ್ ವೀಲ್ ಸಂಸ್ಥೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು.
ನೂರಕ್ಕೂ ಅಧಿಕ ಮಂದಿ ಸೇರಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಘೋಷಣೆ ಕೂಗಿದರು.ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಚಿತ್ರ ರಮೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಶಾಲನಗರ ವಿವಿಧ ಮಹಿಳಾ ಸಂಘಟನೆಗಳು ಐಎಂಎ ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕ ಸೇರಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.