ಬನ್ನಿಮಹಾಂಕಾಳಿ ಅಮ್ಮನ ದೇಗುಲಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಿ

KannadaprabhaNewsNetwork |  
Published : Jun 29, 2024, 12:39 AM IST
27ಕೆಆರ್ ಎಂಎನ್ 1.ಜೆಪಿಜಿರಾಮನಗರದ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಬರುವ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇಗುಲ ಮುಜರಾಯಿ ವ್ಯಾಪ್ತಿಯ ಸಿ ವರ್ಗಕ್ಕೆ ಬರಲಿದೆ. ಆದರೆ, ಕೆಲವರು ಖಾಸಗಿ ಟ್ರಸ್ಟ್ ಸ್ಥಾಪಿಸಿ ಸಾರ್ವಜನಿಕರಿಗೂ ಮಾಹಿತಿ ನೀಡದೆ ಕರಗದ ಹಬ್ಬ ಮಾಡುತ್ತಿದ್ದಾರೆ. ಹಾಗಾಗಿ ದೇವಾಲಯಕ್ಕೆ ಅಧಿಕೃತ ಸರ್ಕಾರದ ವ್ಯವಸ್ಥಾಪನಾ ಸಮಿತಿ ರಚನೆ ಮಾಡಬೇಕು ಎಂದು ಉಪವಿಭಾಗೀಯ ಮಟ್ಟ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಹರೀಶ್ ಎನ್. ಬಾಲು ಆಗ್ರಹಿಸಿದರು.

ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇಗುಲ ಮುಜರಾಯಿ ವ್ಯಾಪ್ತಿಯ ಸಿ ವರ್ಗಕ್ಕೆ ಬರಲಿದೆ. ಆದರೆ, ಕೆಲವರು ಖಾಸಗಿ ಟ್ರಸ್ಟ್ ಸ್ಥಾಪಿಸಿ ಸಾರ್ವಜನಿಕರಿಗೂ ಮಾಹಿತಿ ನೀಡದೆ ಕರಗದ ಹಬ್ಬ ಮಾಡುತ್ತಿದ್ದಾರೆ. ಹಾಗಾಗಿ ದೇವಾಲಯಕ್ಕೆ ಅಧಿಕೃತ ಸರ್ಕಾರದ ವ್ಯವಸ್ಥಾಪನಾ ಸಮಿತಿ ರಚನೆ ಮಾಡಬೇಕು ಎಂದು ಉಪವಿಭಾಗೀಯ ಮಟ್ಟ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಹರೀಶ್ ಎನ್. ಬಾಲು ಆಗ್ರಹಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಬರುವ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ದೇವಾಲಯದ ವಿಚಾರವಾಗಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ತಿಕ್ಕಾಟ ನಡೆಯುತ್ತಿದೆ. ದೇವಾಲಯವೂ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಖಾಸಗಿ ಟ್ರಸ್ಟ್ ರಚಿಸಿಕೊಳ್ಳಲು ಅವಕಾಶವಿಲ್ಲ. ಈ ನಿಯಮವನ್ನು ಉಲ್ಲಂಘಿಸಿ ಕೆಲವರು ಟ್ರಸ್ಟ್ ರಚಿಸಿಕೊಂಡು ಹಬ್ಬ ಆಚರಣೆ ಮಾಡುತ್ತಿದ್ದಾರೆ ಎಂದರು.

ಇಂತಹ ಘಟನೆಗಳಿಗೆ ಹಾಕುವ ಸಂಬಂಧ ಮುಜರಾಯಿ ಇಲಾಖೆ ಎ ಗ್ರೇಡ್ ದೇವಾಲಯಗಳಲ್ಲಿ ಜಾರಿ ಇರುವ ಮಾದರಿಯಲ್ಲಿ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇಗುಲದಲ್ಲಿ ಸರ್ಕಾರದ ವತಿಯಿಂದಲೇ ವ್ಯವಸ್ಥಾಪನಾ ಸಮಿತಿ ರಚನೆ ಮಾಡಬೇಕು. ಈ ಸಮಿತಿ ವತಿಯಿಂದಲೇ ಪ್ರತಿ ವರ್ಷ ಹಬ್ಬವನ್ನು ಅದ್ಧೂರಿ ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.

ಕಳೆದ ಹಲವು ದಿನಗಳಿಂದ ದೇವಾಲಯದಲ್ಲಿ ನಡೆಯುತ್ತಿರುವ ಆಗುಹೋಗುಗಳು ಸಾಕಷ್ಟು ಸುದ್ದಿ ಮಾಡುತ್ತಿವೆ. ಅಮ್ಮನವರ ಕರಗ ಮಹೋತ್ಸವ ಶೀಘ್ರದಲ್ಲಿಯೇ ಆಗಮಿಸಲಿದೆ. ಭಕ್ತಾದಿಗಳು ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.

ದೇವರು ಉದ್ಭವ ಆದಾಗಿನಿಂದಲೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರ ಜತೆಗೆ ಎಲ್ಲ ಸಮುದಾಯದವರು ಇದಕ್ಕೆ ಕೈಜೋಡಿಸಿ ಪೂಜಿಸಿಕೊಂಡು ಬರುತ್ತಿದ್ದಾರೆ. ಅದರಲ್ಲೂ ಕೊಂಡ ಬಂಡಿ ಮಾಡುವುದು ದಲಿತ ಸಮುದಾಯದವರೆ ಆಗಿದ್ದಾರೆ. ಸೂಕ್ಷ್ಮ ವಿಷಯವಾಗಿರುವುದರಿಂದ ಹಬ್ಬವನ್ನು ಸರ್ಕಾರದ ವತಿಯಿಂದಲೇ ಆಯೋಜಿಸಬೇಕು ಎಂದು ತಿಳಿಸಿದರು.

ದೇವಾಲಯವೂ ತಹಸೀಲ್ದಾರ್ ಅವರು ಮೇಲ್ವಿಚಾರಣೆ ಮಾಡುವುದರಿಂದ ಇಡೀ ಕರಗ ಮಹೋತ್ಸವವನ್ನು ಸರ್ಕಾರದ ನೇತೃತ್ವದಲ್ಲಿಯೇ ನಡೆಸಬೇಕು. ಆ ಮೂಲಕ ದೇವಾಲಯದಲ್ಲಿ ನಡೆಯುತ್ತಿರುವ ತಿಕ್ಕಾಟಕ್ಕೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಸಭೆಯಲ್ಲಿ ರಾಮನಗರ ಉಪವಿಭಾಗಾಧಿಕಾರಿ ಬಿನೋಯ್, ಡಿವೈಎಸ್ಪಿ ದಿನಕರ್ ಶೆಟ್ಟಿ, ಬಿಇಒ ಸೋಮಲಿಂಗಯ್ಯ, ಡಿಎಸ್ ಪದ್ಮಾ, ರಾಮನಗರ ಇಒ ಪ್ರದೀಪ್, ಸಮಾಜದ ಕಲ್ಯಾಣ ಇಲಾಖೆ ಸಹಾಯಕ ನಿರ್ಧೇಶಕ ಡಾ. ಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಸೇರಿದಂತೆ ಹಲವು ಅಧಿಕಾರಿಗಳು ಇತರರಿದ್ದರು.

27ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಬರುವ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ಹೆಚ್ಚಿದ ಒತ್ತಡ
ಇಂದು ಬೆಂಗ್ಳೂರಿಗೆ ಡಿಕೆಶಿಯಿಂದ 6ನೇ ಗ್ಯಾರಂಟಿ ಘೋಷಣೆ