ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪುರಸಭೆ ಅಧ್ಯಕ್ಷ ಗೋವಿಂದ ಅಧ್ಯಕ್ಷತೆಯಲ್ಲಿ ಪುರಭೆ ಸಭಾಂಗಣದಲ್ಲಿ ಕರೆದಿದ್ದ ಕನ್ನಡ ಅಭಿಮಾನಿಗಳ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
ನಿವೇಶ ಇದ್ದರೂ ಕಟ್ಟಡ ಕಟ್ಟಿಲ್ಲ
ಪುರಸಭೆ ಸದಸ್ಯ ಚಂದ್ರಾರೆಡ್ಡಿ ಮಾತನಾಡಿ, ಭವನ ನಿರ್ಮಾಣ ಮಾಡಬೇಕು ಅಂದರೆ ಒಬ್ಬರಿಂದ ಆಗುವುದಿಲ್ಲ. ಅದಕ್ಕೆ ಸರ್ಕಾರ ಮಟ್ಟದಲ್ಲಿ ಅನುದಾನ ಬೇಕಾಗುತ್ತದೆ. ಇವೆಲ್ಲಾ ಆಗದ ಕೆಲಸ. ಭವನ ನಿರ್ಮಾಣಕ್ಕೆ ಅಂದಾಜು ವೆಚ್ಚ ಎಷ್ಟಾಗುತ್ತದೆ, ನಿಮ್ಮ ಸಂಘದಲ್ಲಿ ಎಷ್ಟು ಫಂಡ್ ಇದೆ ಎಂದು ಪ್ರಶ್ನಿಸಿದರು.
ಬಳಿಕ ಶಾಸಕರ ನೇತೃತ್ವದಲ್ಲೇ ಕನ್ನಡ ಭವನ ನಿರ್ಮಾಣ ಮಾಡಲು ಒಕ್ಕೊರಳಿನ ಅಭಿಪ್ರಾಯಗಳು ಮತ್ತು ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕನ್ನಡ ಸಂಘ ಅಧ್ಯಕ್ಷ ಪಲ್ಲವಿ ಮಣಿ ಶಾಸಕರ ನೇತೃತ್ವದಲ್ಲೇ ಭವನ ನಿರ್ಮಾಣ ಮಾಡಲು ಬೆಂಬಲ ವ್ಯಕ್ತಪಡಿಸಿದರು.ಶಾಸಕ ನಾರಾಯಣಸ್ವಾಮಿ ನೇತೃತ್ವ
ಇದೇ ಸಂದರ್ಭದಲ್ಲಿ ಬಂಗಾರಪೇಟೆ ಕನ್ನಡ ಭವನ ನಿರ್ಮಾಣ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಪುರಸಭೆ ಅಧ್ಯಕ್ಷ ಗೋವಿಂದ ಸೇರಿದಂತೆ ಒಟ್ಟು ಏಳು ಸದಸ್ಯರ ಸಮಿತಿ ರಚಿಸಲಾಯಿತು. ಕನ್ನಡಭವನದ ನೀಲಿ ನಕ್ಷೆಯನ್ನು ತಯಾರಿಸಿ ಲೋಕೋಪಯೋಗಿ ಇಲಾಖೆಯಿಂದ ಕಟ್ಟಡ ನಿರ್ಮಾಣಕ್ಕೆ ಅಂದಾಜು ವೆಚ್ಚ ಸಿದ್ದಪಡಿಸಿ ಸರ್ಕಾರ ಮಟ್ಟದಲ್ಲಿ ಅನುದಾನ ಬಿಡುಗಡೆಗೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಜನವರಿ ಒಂದನೇ ತಾರೀಖುನೊಳಗಡೆ ಕನ್ನಡ ಭವನ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನ ಕರೆಸಲಾಗುವುದು ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಚಂದ್ರಕಲಾ, ಮುಖ್ಯಾಧಿಕಾರಿ ಸತ್ಯನಾರಾಯಣ, ಪೊಲೀಸ್ ಇನ್ಸ್ಫೆಕ್ಟರ್ ನಂಜಪ್ಪ, ಪುರಸಭೆ ಸದಸ್ಯ ಷಫೀ, ಸುಹೇಲ್, ವಸಂತ್, ಕುಂಬಾರಪಾಳ್ಯ ಮಂಜುನಾಥ್, ಗೌತಂ ನಗರ ಪ್ರತಾಪ್, ಕಣಿಂಬೆಲೆ ರಾಮ್ಪ್ರಸಾದ್ ಹಾಗು ಕನ್ನಡಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾರಿದ್ದರು.