ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಚನೆಗೆ ಶಾಲೆಗಳ ನಿರ್ಲಕ್ಷ
ಮನೆಯಿಂದ ಸುರಕ್ಷಿತವಾಗಿ ಶಾಲೆಗೆ ಹೋದ ಮಕ್ಕಳು ಶಾಲೆಯಿಂದಲೂ ಅಷ್ಟೇ ಸುರಕ್ಷಿತವಾಗಿ ಬರಬೇಕು. ಮಕ್ಕಳು ಶಾಲೆಯಲ್ಲಿರುವ ಅವಧಿಯಲ್ಲಿ ಅವರಿಗೆ ಏನೇ ತೊಂದರೆ ಅಥವಾ ಸಮಸ್ಯೆಯಾದರೂ ಅವರು ಶಾಲೆಯಲ್ಲಿ ಮುಕ್ತವಾಗಿ ಹೇಳಿಕೊಳ್ಳುವಂತಿರಬೇಕು. ಮಕ್ಕಳ ಸುರಕ್ಷತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸುವಂತೆ 1990 ರಲ್ಲಿಯೇ ಸುತ್ತೋಲೆ ಹೊರಡಿಸಿದೆ. ಆದರೆ, ಸರ್ಕಾರದ ಆದೇಶವನ್ನು ಶಾಲೆಗಳು ಪಾಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಮಕ್ಕಳು ತಮಗೆ ಆದ ತೊಂದರೆಯನ್ನು ಯಾರೊಂದಿಗೆ ಹೇಳಿಕೊಳ್ಳಬೇಕು. ಮಕ್ಕಳು ಮುಕ್ತ ಮತ್ತು ನಿರ್ಭಯ ವಾತಾವರಣದಲ್ಲಿ ಅತ್ಯಂತ ಸುರಕ್ಷಿತವಾಗಿ ಇರಬೇಕು. ಆದ್ದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ಕಡ್ಡಾಯವಾಗಿ ಮತ್ತು ಆದ್ಯತೆಯ ಮೇಲೆ ರಚಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿಗಳು ರಚನೆಯಾಗಬೇಕು. ಈ ಸಮಿತಿಗಳ ರಚನೆ ಕುರಿತು ಪಂಚಾಯಿತಿಗಳು, ಶಿಕ್ಷಕರಿಗೇ ಮಾಹಿತಿ ಇಲ್ಲ. ಮಕ್ಕಳ ಮೇಲೆ ಯಾರಿಂದಲೂ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ತಡೆಯುವುದೇ ಸಮಿತಿಗಳ ಮುಖ್ಯ ಧ್ಯೇಯವಾಗಿದೆ. ಮಕ್ಕಳ ರಕ್ಷಣೆ ಕೆಲಸ ಪರಿಣಾಮಕಾರಿಯಾಗಿ ಆಗುವ ಅಗತ್ಯವಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ನಡೆಯುತ್ತಿದೆ. ಪೋಸ್ಟರ್,ವಿಡಿಯೊ ಮತ್ತು ಕಿರುಚಿತ್ರಗಳ ಮುಖಾಂತರ ಮಕ್ಕಳ ಹಕ್ಕುಗಳ ರಕ್ಷಣೆಯ ವಿಚಾರಗಳಲ್ಲಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಸಂಖ್ಯೆ 1098 ಅಥವಾ 112 ಸಂಖ್ಯೆಗೆ(24/7) ಕರೆ ಮಾಡಬಹುದು ಎಂದು ಮನವಿ ಮಾಡಿದರು.ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶೆ ಎ.ಅರುಣಕುಮಾರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಸರ್ಕಾರಿ ವಕೀಲರಾದ ಜಯರಾಮರೆಡ್ಡಿ, ಬಿಜಿಎಸ್ ವಿದ್ಯಾ ಸಂಸ್ಥೆಯ ಡಾ.ಮಧುಸೂದನ್, ವಿಕಾಸ್ ರೆಡ್ಡಿ, ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಶಿವರಾಂ ಮತ್ತಿತರರು ಇದ್ದರು.