ಅಖಿಲ ಕೊಡವ ಸಮಾಜದ ಕಾರ್ಯಕಾರಿ ಮಂಡಳಿ ರಚನೆ

KannadaprabhaNewsNetwork |  
Published : Mar 26, 2026, 02:45 AM IST
ಚಿತ್ರ :  23ಎಂಡಿಕೆ1 : ಅಖಿಲ ಕೊಡವ ಸಮಾಜದ ಕಾರ್ಯಕಾರಿ ಮಂಡಳಿ ರಚನೆ ಮಾಡಲಾಯಿತು. | Kannada Prabha

ಸಾರಾಂಶ

ಕೊಡಗು ಮತ್ತು ಕೊಡವ ಜನಾಂಗದ ಹಿತಾಸಕ್ತಿ ಕಾಪಾಡುವ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ 1942ರಲ್ಲಿ ಸ್ಥಾಪನೆಯಾದ ಕೊಡವ ಜನಾಂಗದ ತಕ್ಕಾಮೆ ಮೂಲಕ ಪ್ರಾಧಿನಿಧಿಕ ಸಂಸ್ಥೆಯಾದ ಅಖಿಲ ಕೊಡವ ಸಮಾಜದ ನೂತನ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅದ್ಯಕ್ಷತೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ಅವಿರೋಧವಾಗಿ ರಚನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಕೊಡಗು ಮತ್ತು ಕೊಡವ ಜನಾಂಗದ ಹಿತಾಸಕ್ತಿ ಕಾಪಾಡುವ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ 1942ರಲ್ಲಿ ಸ್ಥಾಪನೆಯಾದ ಕೊಡವ ಜನಾಂಗದ ತಕ್ಕಾಮೆ ಮೂಲಕ ಪ್ರಾಧಿನಿಧಿಕ ಸಂಸ್ಥೆಯಾದ ಅಖಿಲ ಕೊಡವ ಸಮಾಜದ ನೂತನ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅದ್ಯಕ್ಷತೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ಅವಿರೋಧವಾಗಿ ರಚನೆ ಮಾಡಲಾಯಿತು.ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆ ಮಾಡಲಾದ ಕೇಂದ್ರ ಸಮಿತಿ 42 ಸದಸ್ಯರ ಸಭೆಯಲ್ಲಿ ಕಾರ್ಯಕಾರಿ ಮಂಡಳಿ ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ದೇಶ ತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ, ಉಪಾಧ್ಯಕ್ಷರಾಗಿ ಪೋರೆರ ಬಿದ್ದಪ್ಪ,

ಗೌರವ ಕಾರ್ಯದರ್ಶಿಯಾಗಿ ಚೊಟ್ಟಂಡ ಪ್ರಭು ಸೋಮಯ್ಯ, ಜಂಟಿ ಕಾರ್ಯದರ್ಶಿಗಳಾಗಿ ಚೇoದ್ರಿಮಾಡ ಡಿ. ಪೃಥ್ವಿ

ಮತ್ತು ಮನ್ನೇರ ಸರಸ್ವತಿ ರಮೇಶ್, ಖಜಾಂಚಿಯಾಗಿ ಕಾಯಪಂಡ ಸುನಿಲ್, ಕಾನೂನು ಸಲಹೆಗಾರರಾಗಿ ಕುಟ್ಟಂಡ ವಿಜಯ ಉತ್ತಪ್ಪ ಆಯ್ಕೆಯಾಗಿದ್ದಾರೆ.

ಶನಿವಾರ ವಿರಾಜಪೇಟೆ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಆಡಳಿತ ಮಂಡಳಿಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಕಳ–ಹೆಬ್ರಿಯಲ್ಲಿ ಭಾರಿ ಮಳೆ: ಮನೆಗಳಿಗೆ ಹಾನಿ, ಲಕ್ಷಾಂತರ ನಷ್ಟ
ಮಹಿಳೆಯರ ಸ್ವಾವಲಂಬಿ ಜೀವನ ಗ್ರಾಮೀಣ ಅಭಿವೃದ್ಧಿಗೆ ಪೂರಕ