ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಟಿಎಪಿಸಿಎಂಎಸ್ ರೈತಸಭಾಂಗಣದಲ್ಲಿ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಜಂಟಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಕಾಂಗ್ರೆಸ್ನ ಹಣವಂತ ಹಾಗೂ ಮೈತ್ರಿ ಅಭ್ಯರ್ಥಿ ಹೃದಯವಂತ ನಡುವೆ ನಡೆಯುತ್ತಿದೆ ಎಂದರು.
ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆದ್ದು ಕೇಂದ್ರ ಸಚಿವರಾಗುವುದು ಖಚಿತ. ನಾನು ಸೇರಿದಂತೆ ಬೇರೆ ಯಾರೇ ಅಭ್ಯರ್ಥಿಗಳಾಗಿ ಗೆದ್ದರೂ ಸಂಸದರಾಗಿ ಮಾತ್ರ ಕೆಲಸ ಮಾಡಬೇಕಾಗುತ್ತಿತ್ತು. ಆದರೆ, ಎಚ್.ಡಿ. ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರದಲ್ಲಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ, ಮೇಕದಾಟು ಯೋಜನೆಗಳ ಪರಿಹಾರ ಪೂರಕವಾಗಿ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಚಿವರಾಗುವುದರಿಂದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿವೆ. ಹಾಗಾಗಿ ಜಿಲ್ಲೆಯ ಜನತೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಬಹುಮತ ನೀಡಿ ಗೆಲ್ಲಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ನವರು ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುವಂತೆ ಸಂಸದೆ ಸುಮಲತಾ ಅವರಿಗೆ ಅವಾಜ್ ಹಾಕುತ್ತಿದ್ದಾರೆ. ಆದರೆ, ನಿಮ್ಮಲ್ಲರ ಅವಾಜ್ಗಳಿಗೆ ನಮ್ಮ ಅಂಬರೀಶ್ ಅಣ್ಣ ಪತ್ನಿ ಸಂಸದೆ ಸುಮಲತಾ ಬಗ್ಗೋದಿಲ್ಲ ಎನ್ನುವುದು ನಿಮ್ಮ ಗಮನದಲ್ಲಿರಲಿ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸೇರುತ್ತೇನೆಂದು ಅಪಪ್ರಚಾರ:
ನಾರಾಯಣಗೌಡ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ವದಂತಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡೋದಿಲ್ಲ. ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಕೆಲಸ ಮಾಡಿ ಅಧಿಕ ಬಹುತದಿಂದ ಗೆಲ್ಲಿಸುವ ಕೆಲವನ್ನು ನಾವೆಲ್ಲರು ಸೇರಿ ಮಾಡೋಣ ಎಂದರು.
ನಾಟಿ ತಳಿ ಹಾಗೂ ಹೈಬ್ರೀಡ್ ನಡುವೆ ಚುನಾವಣೆ:
ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ಸುನೀಲ್ ಸುಬ್ರಹ್ಮಣ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚ್ ಅಧ್ಯಕ್ಷೆ ಮಂಗಳ ನವೀನ್ಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಬಿಜೆಪಿ ಅಧ್ಯಕ್ಷ ಧನಂಜಯ, ಆನಂದ್, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ಕಣಿವೆ ಯೋಗೇಶ್, ನಿರಂಜನ್ಬಾಬು ಸೇರಿದಂತೆ ಪುರಸಭೆ ಸದಸ್ಯರು, ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.