ಸಿದ್ಧಗಂಗೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

KannadaprabhaNewsNetwork |  
Published : Apr 01, 2026, 01:15 AM IST
9999 | Kannada Prabha

ಸಾರಾಂಶ

ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೯ನೇ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ, ತುಮಕೂರು ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೯ನೇ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ ಆಶೀರ್ವಾದ ಪಡೆದರು. ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪನವರು, ಶ್ರೀಗಳ ೧೧೯ನೇ ಜನ್ಮ ಜಯಂತ್ಯುತ್ಸವದ ಶುಭ ಸಂದರ್ಭದಲ್ಲಿ ಗದ್ದುಗೆ ದರ್ಶನ ಪಡೆಯುವಂತಹ ಸೌಭಾಗ್ಯ ನನಗೆ ಸಿಕ್ಕಿದೆ ಎಂದರು. ಪ್ರತಿನಿತ್ಯವೂ ನಾನು ಶ್ರೀಗಳನ್ನು ನೆನಪು ಮಾಡಿಕೊಳ್ಳದೆ, ಅವರು ಹೆಸರನ್ನು ಜಪಿಸದೆ ಯಾವ ಕೆಲಸವನ್ನೂ ಮಾಡುವುದಿಲ್ಲ. ಪೂಜ್ಯರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎಂದು ಅವರು ಹೇಳಿದರು.

ನಾಳೆ ಶ್ರೀಗಳ 119ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ನಡೆಯುತ್ತಿದ್ದು, ಈ ಅಭೂತ ಪೂರ್ವ ಕಾರ್ಯಕ್ರಮದಲ್ಲಿ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುತ್ತಿರುವುದು ಸ್ವಾಗತಾರ್ಹ. ರಾಷ್ಟ್ರಪತಿಗಳು ಶ್ರೀಕ್ಷೇತ್ರಕ್ಕೆ ಆಗಮಿಸುತ್ತಿರುವುದು ತುಮಕೂರಿನ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ರುದ್ರೇಶ್, ಮೈದಾಳ ಮಂಜುನಾಥ್, ಮರಿಸ್ವಾಮಿ, ಹೆಚ್.ಎನ್. ದೀಪಕ್, ಬಿಜೆಪಿ ಮುಖಂಡರಾದ ಧನುಷ್, ವಿರೂಪಾಕ್ಷಪ್ಪ, ಚೇತನ್, ಗಣೇಶ್, ರಾಜಶೇಖರ್, ಶಂಕರ್, ಮಾಜಿ ಮೇಯರ್ ಬಿ.ಜಿ. ಕೃಷ್ಣಪ್ಪ, ಮಾಜಿ ಪಾಲಿಕೆ ಸದಸ್ಯ ರಮೇಶ್, ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾವಗಡದಲ್ಲಿ ವಿಜಯನಗರ ಕೃಷ್ಣದೇವರಾಯನ ಶಾಸನ ಪತ್ತೆ
ಗುಣಮಟ್ಟದ ಹಾಲು ಶೇಖರಣೆಯಲ್ಲಿ ತುಮಕೂರು ರಾಜ್ಯಕ್ಕೆ ಪ್ರಥಮ